12:54 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ

06/10/2022, 21:10

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಕಾಗವಾಡ  ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ ಹಂಗಾಮಿಗೆ ಚಾಲನೆ ನೀಡಿ ಮಾತನಾಡುತ್ತಾ ಕಳೆದ ವರ್ಷ ಸನ್ 2021-22 ನೇ ಸಾಲಿನಲ್ಲಿ ನಮ್ಮ ಕಾರ್ಖಾನೆಗೆ ರೈತ ಬಾಂಧವರು ಸುಮಾರು 17 ಲಕ್ಷ ಟನ್ ಕಬ್ಬು ನೀಡಿ ಸಹಕರಿಸಿ, ವಿಶೇಷ ದಾಖಲೆ ನಿರ್ಮಿಸಲು ಕಾರಣೀಭೂತರಾಗಿದ್ದೀರಿ. ಅದೇ ಪ್ರಕಾರ ನಾವು ರೈತರಿಗೆ ಪ್ರತಿ ಟನ್ ಗೆ 2700 ರೂ. ರಂತೆ ದರವನ್ನು ನೀಡಿದ್ದೇವು.

ಈ ಸನ್ 2022 – 23 ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆಯೂ 20 ಲಕ್ಷ ಟನ್ ಕಬ್ಬು ನುರಿಸುವ ಉದ್ದೇಶವನ್ನು ಹೊಂದಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಟನ್ ಗೆ ರೂ. 2800/- ರಂತೆ ದರವನ್ನು ನೀಡಲು ಸಿದ್ಧರಾಗಿರುವುದಾಗಿ ಹೇಳಿದರು. 

ರೈತ ಬಾಂಧವರು ನಮ್ಮ ಕಾರ್ಖಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಸಹಕರಿಸುವಂತೆ ಶ್ರೀನಿವಾಸ ಪಾಟೀಲ ಮನವಿ ಮಾಡಿಕೊಂಡರು.

 ಈ ಸಮಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ, ಕಾರ್ಯನಿರ್ವಾಹಕ ನಿರ್ದೇಶಕ ಯೋಗೇಶ ಪಾಟೀಲ, ಸುಶಾಂತ  ಪಾಟೀಲ, ಅಬ್ದುಲಬಾರಿ ಮುಲ್ಲಾ ಹಾಗೂ ಕಾರ್ಖಾನೆಯ ನಿರ್ದೇಶಕ ಮಂಡಳಿಯ ಸದಸ್ಯರು, ಸ್ಥಳೀಯ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾರ್ಖಾನೆಯ ವಿವಿಧ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿಗಳು ಕಾರ್ಮಿಕರು ಅಪಾರ ಸಂಖ್ಯೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು