4:17 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ  ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ

06/10/2022, 21:35

ಮಂಗಳೂರು(reporter Karnataka.com):

ಆಸೆಗಳ ಲೋಕದಲಿ…

ಅರಿಯದೆ ಮೂಡಿದ ಕಥೆ ಇದು….

ಭಾವನೆಗಳ ಸಾಲಿನಲಿ….

ತಿಳಿಯದೆಯೇ ಹರಿದ ವ್ಯಥೆ ಇದು….

*ವೃಷ್ಟಿ..* (ಕನ್ನಡ ಚಲನಚಿತ್ರ)

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. 


ಪ್ರಕಾಶ್ ನಾಥ ಮಂದಿರದ ಸುಮಂತ್  ಅವರು ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತಿ ಇದ್ದರು. 

ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ. ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ, ಸಿಂಚನಾ ಪಿ‌.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು