3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ

29/06/2021, 17:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳುಹಿಸಿದ ಶಾಸಕರ ಸುಳಿವಿಲ್ಲ. ಇದರಿಂದ ಗ್ರಾಮಸ್ಥರು ಕೂಡ ಆಕ್ರೋಶಗೊಂಡಿದ್ದಾರೆ.

ಬಡ ದಲಿತ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆಯುತ್ತಿದ್ದ ವೇಳೆ ನೀರು ಪಾಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಇಡೀ ಗ್ರಾಮವೇ ನಡುಗು ಹೋಗಿತ್ತು. ಕುಟುಂಬಸ್ಥರ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್, ತಹಶೀಲ್ದಾರ್, ಕಂದಾಯ ಅಧಿಕಾರಿಗಳು ದೌಡಾಯಿಸಿದ್ದರು. ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ತಂಡ, ಮುಳುಗು ತಜ್ಞರು ನಾನಾ ಕಡೆಗಳಿಂದ ಆಗಮಿಸಿದ್ದರು. ಆದರೆ ಜನರು ಮತ ಹಾಕಿ ಆರಿಸಿ ಕಳುಹಿಸಿದ ಜನಪ್ರತಿನಿಧಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತ್ರ ಇತ್ತ ಕಾಲು ಇಡಲೇ ಇಲ್ಲ.


ಶಾಸಕರು ಯಾವಾಗಲೂ ತುಂಬಾ ಬ್ಯುಸಿ ಇರುತ್ತಾರೆ. ಅವರಿಗೆ ಇಂತಹ ಚಿಲ್ಲರೆ ವಿಷಯಕ್ಕೆ ತಲೆ ಹಾಕಲು ಎಲ್ಲಿದೆ ಸಮಯ ಎಂದು ಗ್ರಾಮಸ್ಥರು ತಮಾಷೆ ಮಾಡುತ್ತಾರೆ. ವಾಸ್ತವದಲ್ಲಿ ಕೂಡ ಇದು ಹೌದು. ಸರಕಾರ ಕಟ್ಟುವುದು, ಸರಕಾರ ಬೀಳಿಸುವುವಲ್ಲಿ ಕೆಲವು ಶಾಸಕರು ಬ್ಯುಸಿಯಾಗಿರುತ್ತಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು