12:26 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ

29/06/2021, 17:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳುಹಿಸಿದ ಶಾಸಕರ ಸುಳಿವಿಲ್ಲ. ಇದರಿಂದ ಗ್ರಾಮಸ್ಥರು ಕೂಡ ಆಕ್ರೋಶಗೊಂಡಿದ್ದಾರೆ.

ಬಡ ದಲಿತ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆಯುತ್ತಿದ್ದ ವೇಳೆ ನೀರು ಪಾಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಇಡೀ ಗ್ರಾಮವೇ ನಡುಗು ಹೋಗಿತ್ತು. ಕುಟುಂಬಸ್ಥರ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್, ತಹಶೀಲ್ದಾರ್, ಕಂದಾಯ ಅಧಿಕಾರಿಗಳು ದೌಡಾಯಿಸಿದ್ದರು. ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ತಂಡ, ಮುಳುಗು ತಜ್ಞರು ನಾನಾ ಕಡೆಗಳಿಂದ ಆಗಮಿಸಿದ್ದರು. ಆದರೆ ಜನರು ಮತ ಹಾಕಿ ಆರಿಸಿ ಕಳುಹಿಸಿದ ಜನಪ್ರತಿನಿಧಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತ್ರ ಇತ್ತ ಕಾಲು ಇಡಲೇ ಇಲ್ಲ.


ಶಾಸಕರು ಯಾವಾಗಲೂ ತುಂಬಾ ಬ್ಯುಸಿ ಇರುತ್ತಾರೆ. ಅವರಿಗೆ ಇಂತಹ ಚಿಲ್ಲರೆ ವಿಷಯಕ್ಕೆ ತಲೆ ಹಾಕಲು ಎಲ್ಲಿದೆ ಸಮಯ ಎಂದು ಗ್ರಾಮಸ್ಥರು ತಮಾಷೆ ಮಾಡುತ್ತಾರೆ. ವಾಸ್ತವದಲ್ಲಿ ಕೂಡ ಇದು ಹೌದು. ಸರಕಾರ ಕಟ್ಟುವುದು, ಸರಕಾರ ಬೀಳಿಸುವುವಲ್ಲಿ ಕೆಲವು ಶಾಸಕರು ಬ್ಯುಸಿಯಾಗಿರುತ್ತಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು