1:32 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ

29/06/2021, 17:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳುಹಿಸಿದ ಶಾಸಕರ ಸುಳಿವಿಲ್ಲ. ಇದರಿಂದ ಗ್ರಾಮಸ್ಥರು ಕೂಡ ಆಕ್ರೋಶಗೊಂಡಿದ್ದಾರೆ.

ಬಡ ದಲಿತ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆಯುತ್ತಿದ್ದ ವೇಳೆ ನೀರು ಪಾಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಇಡೀ ಗ್ರಾಮವೇ ನಡುಗು ಹೋಗಿತ್ತು. ಕುಟುಂಬಸ್ಥರ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್, ತಹಶೀಲ್ದಾರ್, ಕಂದಾಯ ಅಧಿಕಾರಿಗಳು ದೌಡಾಯಿಸಿದ್ದರು. ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ತಂಡ, ಮುಳುಗು ತಜ್ಞರು ನಾನಾ ಕಡೆಗಳಿಂದ ಆಗಮಿಸಿದ್ದರು. ಆದರೆ ಜನರು ಮತ ಹಾಕಿ ಆರಿಸಿ ಕಳುಹಿಸಿದ ಜನಪ್ರತಿನಿಧಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತ್ರ ಇತ್ತ ಕಾಲು ಇಡಲೇ ಇಲ್ಲ.


ಶಾಸಕರು ಯಾವಾಗಲೂ ತುಂಬಾ ಬ್ಯುಸಿ ಇರುತ್ತಾರೆ. ಅವರಿಗೆ ಇಂತಹ ಚಿಲ್ಲರೆ ವಿಷಯಕ್ಕೆ ತಲೆ ಹಾಕಲು ಎಲ್ಲಿದೆ ಸಮಯ ಎಂದು ಗ್ರಾಮಸ್ಥರು ತಮಾಷೆ ಮಾಡುತ್ತಾರೆ. ವಾಸ್ತವದಲ್ಲಿ ಕೂಡ ಇದು ಹೌದು. ಸರಕಾರ ಕಟ್ಟುವುದು, ಸರಕಾರ ಬೀಳಿಸುವುವಲ್ಲಿ ಕೆಲವು ಶಾಸಕರು ಬ್ಯುಸಿಯಾಗಿರುತ್ತಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು