7:54 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ

29/06/2021, 17:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳುಹಿಸಿದ ಶಾಸಕರ ಸುಳಿವಿಲ್ಲ. ಇದರಿಂದ ಗ್ರಾಮಸ್ಥರು ಕೂಡ ಆಕ್ರೋಶಗೊಂಡಿದ್ದಾರೆ.

ಬಡ ದಲಿತ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆಯುತ್ತಿದ್ದ ವೇಳೆ ನೀರು ಪಾಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಇಡೀ ಗ್ರಾಮವೇ ನಡುಗು ಹೋಗಿತ್ತು. ಕುಟುಂಬಸ್ಥರ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್, ತಹಶೀಲ್ದಾರ್, ಕಂದಾಯ ಅಧಿಕಾರಿಗಳು ದೌಡಾಯಿಸಿದ್ದರು. ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ತಂಡ, ಮುಳುಗು ತಜ್ಞರು ನಾನಾ ಕಡೆಗಳಿಂದ ಆಗಮಿಸಿದ್ದರು. ಆದರೆ ಜನರು ಮತ ಹಾಕಿ ಆರಿಸಿ ಕಳುಹಿಸಿದ ಜನಪ್ರತಿನಿಧಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತ್ರ ಇತ್ತ ಕಾಲು ಇಡಲೇ ಇಲ್ಲ.


ಶಾಸಕರು ಯಾವಾಗಲೂ ತುಂಬಾ ಬ್ಯುಸಿ ಇರುತ್ತಾರೆ. ಅವರಿಗೆ ಇಂತಹ ಚಿಲ್ಲರೆ ವಿಷಯಕ್ಕೆ ತಲೆ ಹಾಕಲು ಎಲ್ಲಿದೆ ಸಮಯ ಎಂದು ಗ್ರಾಮಸ್ಥರು ತಮಾಷೆ ಮಾಡುತ್ತಾರೆ. ವಾಸ್ತವದಲ್ಲಿ ಕೂಡ ಇದು ಹೌದು. ಸರಕಾರ ಕಟ್ಟುವುದು, ಸರಕಾರ ಬೀಳಿಸುವುವಲ್ಲಿ ಕೆಲವು ಶಾಸಕರು ಬ್ಯುಸಿಯಾಗಿರುತ್ತಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು