3:44 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಮಂಗಳೂರಿನ ವಾಸುಕಿ ನಗರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ 

07/10/2022, 19:52

ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡ್‌  ವ್ಯಾಪ್ತಿಯ ವಾಸುಕಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ವಾಸುಕಿ ನಗರದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ವೇದಿಕೆ ನಿರ್ಮಿಸುವ ಕುರಿತು ಸಾರ್ವಜನಿಕರ ಬೇಡಿಕೆ ಬಂದಿತ್ತು. ಆ ಪ್ರಕಾರವಾಗಿ ಪಾಲಿಕೆ ಸಂಬಂಧಪಟ್ಟ ಜಾಗದಲ್ಲಿ ವೇದಿಕೆ ಹಾಗೂ ಗ್ರೀನ್ ರೂಮ್ ನಿರ್ಮಾಣಕ್ಕೆ 20 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು. 

ಜಪ್ಪಿನಮೊಗರು ವಾರ್ಡಿನಲ್ಲಿ ಕಳೆದ 4 ವರ್ಷಗಳಿಂದ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಉಂಟಾಗುವ‌ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಿದ ಕಾರಣ ಬಹು ವರ್ಷಗಳ ನಂತರ ಈ ವಾರ್ಡಿನಲ್ಲಿ ನೆರೆ ಹಾವಳಿಯ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲ‌. ರಸ್ತೆ ನಿರ್ಮಾಣ, ಚರಂಡಿ, ತಡೆಗೋಡೆ ನಿರ್ಮಾಣ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಂಗಳೂರು ‌ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ನಯನ ಆರ್. ಕೋಟ್ಯಾನ್, ಸ್ಥಳೀಯ ಕಾರ್ಪೋರೇಟರ್ ಗಳಾದ ವೀಣಾ ಮಂಗಳ,ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಸುರೇಂದ್ರ ಜಪ್ಪಿನಮೊಗರು, ಭರತ್ ರಾಜ್ ಶೆಟ್ಟಿ, ಸುಕೇಶ್ ಬಜಾಲ್, ಎಂ.ಪಿ ಗಣೇಶ್, ರವೀಂದ್ರ ರಾವ್, ಎಸ್ ಕುಮಾರ್, ಪಿ.ಎ ಶ್ರೀನಿವಾಸ್, ರಮೇಶ್ ಸಹ್ಯಾದ್ರಿ, ರಾಮು, ಸಂದೇಶ್ ಶೆಟ್ಟಿ, ರಾಮ್ ಪ್ರಸಾದ್ ಶೆಟ್ಟಿ, ಉದಯ್, ವಿನ್ಸೆಂಟ್ ಡಿಸೋಜ, ಸುನಿತಾ, ಸುಜಾತ, ಪ್ರೀತಿ, ವಿದ್ಯಾ, ವಿನೋದ್ ರಾವ್, ವಿದ್ಯಾ ರಾವ್, ವಿಜಯ್, ಪ್ರವೀಣ್ ಕುಮಾರ್, ರಾಘವೇಂದ್ರ, ಸ್ನೇಹ, ಜಯಶ್ರೀ, ಸುಮತಿ, ಈಶ್ವರ್, ನಾಗೇಂದ್ರ, ಸುಪ್ರಿಯಾ, ರಾಮಚಂದ್ರ ಆಳ್ವ, ಜಯಪ್ರಕಾಶ್, ಪ್ರವೀಣ್ ನಿಡ್ಡೇಲ್, ಭಾರ್ಗವ‌ ಬಲ್ಯಾಯ, ಚಂದ್ರಶೇಖರಯ್ಯ, ರಾಘವೇಂದ್ರ ‌ಶೆಟ್ಟಿ, ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು