10:04 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಅವಿಭಜಿತ ದ.ಕ. ಜಿಲ್ಲೆಯಿಂದ ಶ್ಯಾಮಲಾ ಕುಂದರ್ ಕಣಕ್ಕಿಲಿಸಲು ಬಿಜೆಪಿ ಒಲವು?

09/10/2022, 11:21

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info. reporterKarnataka@gmail.com
ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗ ರಂಗೇರಲಾರಂಭಿಸಿದೆ. ಒಂದು ಕಡೆ ಆಡಳಿತರೂಢ ಬಿಜೆಪಿ ಅಧಿಕಾರ ಉಳಿಸಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೇರಲು ಹೋರಾಟ ನಡೆಸುತ್ತಿದೆ. ಯಾರೂ ಅಧಿಕಾರಕ್ಕೇರಬೇಕಾದರೂ ಕರಾವಳಿ ಕರ್ನಾಟಕದ ಜನಾಭಿಪ್ರಾಯ ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ಪ್ರಮುಖ ಪಕ್ಷಗಳು ಮತ್ತೊಮ್ಮೆ ಕರಾವಳಿಯತ್ತ ಚಿತ್ತ ಹರಿಸಿದೆ.
ಹಿಂದುತ್ವವನ್ನೇ ಪ್ರಮುಖ ಅಸ್ತ್ರವಾಗಿ ಉಪಯೋಗಿಸುತ್ತಿರುವ ಬಿಜೆಪಿ ಈ ಬಾರಿ ಹಿಂದುತ್ವದ ಜತೆ ಸಾಮಾಜಿಕ ನ್ಯಾಯದ ಕಡೆಗೂ ದೃಷ್ಟಿ ಬೀರಲಿದೆ ಎಂಬ ಮಾಹಿತಿ ಪಕ್ಷದ ಕೆಲವು ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲು ಚಿಂತನೆ ನಡೆಸಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯಿಂದ ತಲಾ ಒಂದು ಕ್ಷೇತ್ರವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ. ಇದರಲ್ಲಿ ಒಂದು ಕ್ಷೇತ್ರದ ಅಭ್ಯರ್ಥಿಯನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಅವರು ಯಾರೆಂದರೆ ಉಡುಪಿ ಜಿಲ್ಲೆಯ ಶ್ಯಾಮಲಾ ಕುಂದರ್ ಅವರು. ಕರಾವಳಿ ಮಾತ್ರವಲ್ಲ ರಾಜ್ಯಮಟ್ಟದಲ್ಲಿಯೂ ಶ್ಯಾಮಲಾ ಕುಂದರ್ ಅವರದ್ದು ಬಹಳ ದೊಡ್ಡ ಹೆಸರು.
ಕಾರ್ಕಳ ಮೂಲದ ಶ್ಯಾಮಲಾ ಕುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಮಾತ್ರವಲ್ಲ ಇಡೀ ದಕ್ಷಿಣ ಭಾರತದ ಉಸ್ತುವಾರಿಯಾಗಿ ಕೆಲಸ ಮಾಡಿದವರು. ಸುಮಾರು 25 ವರ್ಷಗಳಿಂದ ಸಕ್ರೀಯ ರಾಜಕೀಯದಲ್ಲಿ ತೊಡಗಿರುವ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುವ ಮೂಲಕ ಹಂತ ಹಂತವಾಗಿ ಮೇಲೇರಿದ ರಾಜಕೀಯ ಅನುಭವಿ. ತನ್ನ ರಾಜಕೀಯ ಜೀವನದುದ್ಧಕ್ಕೂ ದಕ್ಷತೆಯನ್ನು ಕಾಪಾಡಿಕೊಂಡು ಬಂದು ಶುದ್ಧ ಹಸ್ತರೆಂಬ ಖ್ಯಾತಿ ಪಡೆದವರು. ಈ ಕಾರಣದಿಂದಲೇ ಬಿಜೆಪಿ ಹೈಕಮಾಂಡಿಗೂ ಶ್ಯಾಮಲಾ ಕುಂದರ್ ಎಂದರೆ ಬಲು ಅಚ್ಚು ಮೆಚ್ಚು. ಪಕ್ಷದ ರಾಜ್ಯ ಕೋರ್ ಕಮಿಟಿ, ಹೈಕಮಾಂಡ್ ಇವರ ಅಭ್ಯರ್ಥಿತನಕ್ಕೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು