3:28 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಅವಿಭಜಿತ ದ.ಕ. ಜಿಲ್ಲೆಯಿಂದ ಶ್ಯಾಮಲಾ ಕುಂದರ್ ಕಣಕ್ಕಿಲಿಸಲು ಬಿಜೆಪಿ ಒಲವು?

09/10/2022, 11:21

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info. reporterKarnataka@gmail.com
ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗ ರಂಗೇರಲಾರಂಭಿಸಿದೆ. ಒಂದು ಕಡೆ ಆಡಳಿತರೂಢ ಬಿಜೆಪಿ ಅಧಿಕಾರ ಉಳಿಸಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೇರಲು ಹೋರಾಟ ನಡೆಸುತ್ತಿದೆ. ಯಾರೂ ಅಧಿಕಾರಕ್ಕೇರಬೇಕಾದರೂ ಕರಾವಳಿ ಕರ್ನಾಟಕದ ಜನಾಭಿಪ್ರಾಯ ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ಪ್ರಮುಖ ಪಕ್ಷಗಳು ಮತ್ತೊಮ್ಮೆ ಕರಾವಳಿಯತ್ತ ಚಿತ್ತ ಹರಿಸಿದೆ.
ಹಿಂದುತ್ವವನ್ನೇ ಪ್ರಮುಖ ಅಸ್ತ್ರವಾಗಿ ಉಪಯೋಗಿಸುತ್ತಿರುವ ಬಿಜೆಪಿ ಈ ಬಾರಿ ಹಿಂದುತ್ವದ ಜತೆ ಸಾಮಾಜಿಕ ನ್ಯಾಯದ ಕಡೆಗೂ ದೃಷ್ಟಿ ಬೀರಲಿದೆ ಎಂಬ ಮಾಹಿತಿ ಪಕ್ಷದ ಕೆಲವು ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲು ಚಿಂತನೆ ನಡೆಸಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯಿಂದ ತಲಾ ಒಂದು ಕ್ಷೇತ್ರವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ. ಇದರಲ್ಲಿ ಒಂದು ಕ್ಷೇತ್ರದ ಅಭ್ಯರ್ಥಿಯನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಅವರು ಯಾರೆಂದರೆ ಉಡುಪಿ ಜಿಲ್ಲೆಯ ಶ್ಯಾಮಲಾ ಕುಂದರ್ ಅವರು. ಕರಾವಳಿ ಮಾತ್ರವಲ್ಲ ರಾಜ್ಯಮಟ್ಟದಲ್ಲಿಯೂ ಶ್ಯಾಮಲಾ ಕುಂದರ್ ಅವರದ್ದು ಬಹಳ ದೊಡ್ಡ ಹೆಸರು.
ಕಾರ್ಕಳ ಮೂಲದ ಶ್ಯಾಮಲಾ ಕುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಮಾತ್ರವಲ್ಲ ಇಡೀ ದಕ್ಷಿಣ ಭಾರತದ ಉಸ್ತುವಾರಿಯಾಗಿ ಕೆಲಸ ಮಾಡಿದವರು. ಸುಮಾರು 25 ವರ್ಷಗಳಿಂದ ಸಕ್ರೀಯ ರಾಜಕೀಯದಲ್ಲಿ ತೊಡಗಿರುವ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುವ ಮೂಲಕ ಹಂತ ಹಂತವಾಗಿ ಮೇಲೇರಿದ ರಾಜಕೀಯ ಅನುಭವಿ. ತನ್ನ ರಾಜಕೀಯ ಜೀವನದುದ್ಧಕ್ಕೂ ದಕ್ಷತೆಯನ್ನು ಕಾಪಾಡಿಕೊಂಡು ಬಂದು ಶುದ್ಧ ಹಸ್ತರೆಂಬ ಖ್ಯಾತಿ ಪಡೆದವರು. ಈ ಕಾರಣದಿಂದಲೇ ಬಿಜೆಪಿ ಹೈಕಮಾಂಡಿಗೂ ಶ್ಯಾಮಲಾ ಕುಂದರ್ ಎಂದರೆ ಬಲು ಅಚ್ಚು ಮೆಚ್ಚು. ಪಕ್ಷದ ರಾಜ್ಯ ಕೋರ್ ಕಮಿಟಿ, ಹೈಕಮಾಂಡ್ ಇವರ ಅಭ್ಯರ್ಥಿತನಕ್ಕೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು