5:43 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು ಇಎಸ್ ಐ ಆಸ್ರತ್ರೆ ಮೇಲ್ದರ್ಜೆಗೇರಿಸಲು ಶಾಸಕ ವೇದವ್ಯಾಸ್ ಕಾಮತ್ ಕೇಂದ್ರ ಸಚಿವ ರಾಮೇಶ್ವರ ತೇಲಿಗೆ ಮನವಿ

09/10/2022, 23:49

ಮಂಗಳೂರು(reporterkarnataka.com):
ನಗರದ ಇ.ಎಸ್.ಐ ಆಸ್ರತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ‌ ಸಲ್ಲಿಸಿದ್ದು, ಇ.ಎಸ್.ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.
ಈ ಕುರಿತು ಮಾತನಾಡಿದ ಅವರು, ನಗರದಲ್ಲಿರುವ ಇ.ಎಸ್.ಐ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆಯಿರುವ ಕಾರಣದಿಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತಿದ್ದು, ಆ ವೆಚ್ಚವನ್ನು ಇ.ಎಸ್.ಐ ಆಸ್ಪತ್ರೆಯ ಮೂಲಕ ಭರಿಸಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ಅಭಿವೃದ್ಧಿಯಿಂದ ನಾಗರಿಕರಿಗೂ ಉತ್ತಮ ಸೌಲಭ್ಯ ನೀಡಬಹುದಾಗಿದ್ದು, ಆ ನಿಟ್ಟಿನಲ್ಲಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ವ್ಯವಸ್ಥಾಪಕ ನಿರ್ದೇಶರಾದ ಎಂ ವೆಂಕಟೇಶ್, ಪಿಎಫ್ ಕಚೇರಿ ಆಯುಕ್ತರಾದ ಉಣ್ಣಿಕೃಷ್ಣನ್, ಇ.ಎಸ್.ಐ ಆಸ್ಪತ್ರೆಯ ಪ್ರಮುಖರು, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು