10:56 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಾಫಿ ಪಿಯೋ ಬಿಸ್ಕೆಟ್ ಕಾವೋ: ಬೆಂಗಳೂರಿನಲ್ಲಿ ಕಾಫಿ ಪ್ರಿಯರಿಗಾಗಿ ‘ಕಾಲ್ ಕಾಫಿ ವಾಲಾ’

09/10/2022, 23:58

ಬೆಂಗಳೂರು(reporterkarnataka.com): ಕಾಫಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಷ್ಟೇ ಚಾಹ ಕುಡಿಯುವವರು ಆದರೂ ತಲೆ ನೋವಾದಾಗ, ಬೇಜಾರಾದಾಗ, ಮಳೆ ಬಂದಾಗ ಹೀಗೆ ಒಂದಲ್ಲ ಒಂದು ಕಾರಣಕ್ಕೆ ಕಾಫಿಯನ್ನು ಸವಿಯುತ್ತೇವೆ. ಇದಕ್ಕಾಗಿಯೇ
ಕಾಫಿ ಪ್ರಿಯರಿಗಾಗಿ ಕುಮಾರಸ್ವಾಮಿ ಲೇ ಔಟ್ ನಲ್ಲಿ ‘ಕಾಲ್ ಕಾಫಿ ವಾಲಾ’ ಕಾಫಿ ಪಿಯೋ ಬಿಸ್ಕೆಟ್ ಕಾವೋ ಎಂಬ ಟ್ಯಾಗ್ ಲೈನ್ ನೊಂದಿಗೆ ಅನೇಕ ಬಗೆಯ ಫ್ಲೇವರ್ಡ್ ಕಾಫಿ ಡಿಕಾಕ್ಷನ್ ಅನ್ನು ಬಿಡುಗಡೆ ಮಾಡಿದೆ.

ಈ ಸಂದರ್ಭದಲ್ಲಿ ಕಾಲ್ ಕಾಫಿ ವಾಲಾದ ವ್ಯವಸ್ಥಾಪಕ ನಿರ್ದೇಶಕ ಅರ್ಪಿತಾ ಪಿ.ಎ., ಎಸ್ ಬಿ ಐ ರಿಜನಲ್ ಮ್ಯಾನೇಜರ್ ಪ್ರದೀಪ್ ಆರ್., ಎಸ್ ಬಿ ಐ ಮ್ಯಾನೇಜರ್ ರುಪ್ನ ಚಕ್ರವರ್ತಿ ಮತ್ತೀತರ ಗಣ್ಯರು ಉಪಸ್ಥಿತರಿದ್ದರು.
ಕಾಫಿ ಪಿಯೋ ಬಿಸ್ಕೆಟ್ ಕಾವೋ ಎಂಬ ಟ್ಯಾಗ್ ಲೈನ್ ನೊಂದಿಗೆ ಫ್ಲೇವರ್ಡ್ ಡಿಕಾಕ್ಷನ್ ಗಳನ್ನು ಬಿಡುಗಡೆ ಮಾಡಿದ ಈ ಕಾಲ್ ಕಾಫಿ ವಾಲಾ ವಿಶೇಷತೆ ಏನೆಂದರೆ ಇಲ್ಲಿ ಕಾಫಿಯನ್ನು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್ ಅಥವಾ ಸ್ಟಿಲ್ ಕಪ್ ನಲ್ಲಿ ಕೊಡುವುದಿಲ್ಲ. ಬದಲಿಗೆ ವೆಪರ್ಸ್ / ಬಿಸ್ಕೆಟ್ ರೀತಿಯ ಕಪ್ ನಲ್ಲಿ ಕಾಫಿಯನ್ನು ಕೊಡುತ್ತಾರೆ. ಕಾಫಿ ಕುಡಿದು ನಂತರ ಬಿಸ್ಕೆಟ್ ಅನ್ನು ತಿನ್ನಬಹುದು. ಹಾಗೇ ಈ ಬಿಸ್ಕೆಟ್ ಕಪ್ ನಲ್ಲಿ ಹತ್ತು ನಿಮಿಷಗಳ ಕಾಲ ಕಾಫಿ ತಣ್ಣಗಾಗುವುದಿಲ್ಲ ಹಾಗಾಗಿ ಬಿಸಿ ಬಿಸಿ ಕಾಫಿಯನ್ನು ಕುಡಿಯುತ್ತ ಕೊನೆಗೆ ಬಿಸ್ಕೆಟ್ ಸವಿಯಬಹುದು.
ಇಲ್ಲಿ ಕ್ಯಾರಮಲ್, ವೆನಿಲ್ಲಾ, ಚಾಕೊಲೆಟ್, ಹ್ಯಾಸಲ್ ನೆಟ್, ವಾಟರ್ ಮೆಲನ್, ಪ್ಲೇನ್ ಫ್ಲೇವರ್ ಗಳು ಲಭ್ಯವಿದ್ದು ಇದು ಕಾಫಿ ಪ್ರಿಯರ ನಾಲಿಗೆಯ ರುಚಿಯನ್ನು ತಣಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು