1:58 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕಾಫಿ ಪಿಯೋ ಬಿಸ್ಕೆಟ್ ಕಾವೋ: ಬೆಂಗಳೂರಿನಲ್ಲಿ ಕಾಫಿ ಪ್ರಿಯರಿಗಾಗಿ ‘ಕಾಲ್ ಕಾಫಿ ವಾಲಾ’

09/10/2022, 23:58

ಬೆಂಗಳೂರು(reporterkarnataka.com): ಕಾಫಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಷ್ಟೇ ಚಾಹ ಕುಡಿಯುವವರು ಆದರೂ ತಲೆ ನೋವಾದಾಗ, ಬೇಜಾರಾದಾಗ, ಮಳೆ ಬಂದಾಗ ಹೀಗೆ ಒಂದಲ್ಲ ಒಂದು ಕಾರಣಕ್ಕೆ ಕಾಫಿಯನ್ನು ಸವಿಯುತ್ತೇವೆ. ಇದಕ್ಕಾಗಿಯೇ
ಕಾಫಿ ಪ್ರಿಯರಿಗಾಗಿ ಕುಮಾರಸ್ವಾಮಿ ಲೇ ಔಟ್ ನಲ್ಲಿ ‘ಕಾಲ್ ಕಾಫಿ ವಾಲಾ’ ಕಾಫಿ ಪಿಯೋ ಬಿಸ್ಕೆಟ್ ಕಾವೋ ಎಂಬ ಟ್ಯಾಗ್ ಲೈನ್ ನೊಂದಿಗೆ ಅನೇಕ ಬಗೆಯ ಫ್ಲೇವರ್ಡ್ ಕಾಫಿ ಡಿಕಾಕ್ಷನ್ ಅನ್ನು ಬಿಡುಗಡೆ ಮಾಡಿದೆ.

ಈ ಸಂದರ್ಭದಲ್ಲಿ ಕಾಲ್ ಕಾಫಿ ವಾಲಾದ ವ್ಯವಸ್ಥಾಪಕ ನಿರ್ದೇಶಕ ಅರ್ಪಿತಾ ಪಿ.ಎ., ಎಸ್ ಬಿ ಐ ರಿಜನಲ್ ಮ್ಯಾನೇಜರ್ ಪ್ರದೀಪ್ ಆರ್., ಎಸ್ ಬಿ ಐ ಮ್ಯಾನೇಜರ್ ರುಪ್ನ ಚಕ್ರವರ್ತಿ ಮತ್ತೀತರ ಗಣ್ಯರು ಉಪಸ್ಥಿತರಿದ್ದರು.
ಕಾಫಿ ಪಿಯೋ ಬಿಸ್ಕೆಟ್ ಕಾವೋ ಎಂಬ ಟ್ಯಾಗ್ ಲೈನ್ ನೊಂದಿಗೆ ಫ್ಲೇವರ್ಡ್ ಡಿಕಾಕ್ಷನ್ ಗಳನ್ನು ಬಿಡುಗಡೆ ಮಾಡಿದ ಈ ಕಾಲ್ ಕಾಫಿ ವಾಲಾ ವಿಶೇಷತೆ ಏನೆಂದರೆ ಇಲ್ಲಿ ಕಾಫಿಯನ್ನು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್ ಅಥವಾ ಸ್ಟಿಲ್ ಕಪ್ ನಲ್ಲಿ ಕೊಡುವುದಿಲ್ಲ. ಬದಲಿಗೆ ವೆಪರ್ಸ್ / ಬಿಸ್ಕೆಟ್ ರೀತಿಯ ಕಪ್ ನಲ್ಲಿ ಕಾಫಿಯನ್ನು ಕೊಡುತ್ತಾರೆ. ಕಾಫಿ ಕುಡಿದು ನಂತರ ಬಿಸ್ಕೆಟ್ ಅನ್ನು ತಿನ್ನಬಹುದು. ಹಾಗೇ ಈ ಬಿಸ್ಕೆಟ್ ಕಪ್ ನಲ್ಲಿ ಹತ್ತು ನಿಮಿಷಗಳ ಕಾಲ ಕಾಫಿ ತಣ್ಣಗಾಗುವುದಿಲ್ಲ ಹಾಗಾಗಿ ಬಿಸಿ ಬಿಸಿ ಕಾಫಿಯನ್ನು ಕುಡಿಯುತ್ತ ಕೊನೆಗೆ ಬಿಸ್ಕೆಟ್ ಸವಿಯಬಹುದು.
ಇಲ್ಲಿ ಕ್ಯಾರಮಲ್, ವೆನಿಲ್ಲಾ, ಚಾಕೊಲೆಟ್, ಹ್ಯಾಸಲ್ ನೆಟ್, ವಾಟರ್ ಮೆಲನ್, ಪ್ಲೇನ್ ಫ್ಲೇವರ್ ಗಳು ಲಭ್ಯವಿದ್ದು ಇದು ಕಾಫಿ ಪ್ರಿಯರ ನಾಲಿಗೆಯ ರುಚಿಯನ್ನು ತಣಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು