5:30 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಸುಲಿಗೆಯ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಕೂಟಗಳ ಪಾಲು: ಅಭಯ ಚಂದ್ರ ಜೈನ್ ಆರೋಪ

10/10/2022, 19:16

ಮಂಗಳೂರು(reporterkarnataka.com):ಸರಕಾರದ ತೀರ್ಮಾನದ ಹೊರತಾಗಿಯೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲೆಂದೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ್ಡಿಯಾಗಿದ್ದಾರೆ. ಈ ಅಕ್ರಮದಲ್ಲಿ ಸಂಸದರು, ಶಾಸಕರುಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಗಂಭೀರ ಆರೋಪ ಮಾಡಿದರು.


ಅಕ್ಟೋಬರ್ 18 ರಂದು ನಡೆಯಲಿರುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯ ಸಿದ್ದತೆಗಾಗಿ ಮೂಡಬಿದ್ರೆ ಸಮಾಜ ಮಂದಿರದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ ಶಾಂತಿಯುತವಾಗಿ ನಡೆಯಲಿರುವ ಟೋಲ್ ಗೇಟ್ ಮುತ್ತಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಪ್ರೇರೇಪಿಸಬೇಕು, ಆ ಮೂಲಕ ಬಿಜೆಪಿಯ ಜನ ವಿರೋಧಿ ಆಡಳಿತಕ್ಕೆ ತಕ್ಕ ಪಾಠ ಕಲಿಸಲು ಸಾಧ್ಯವಾಗಬೇಕು ಎಂದು ಹೇಳಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್, ವಕ್ತಾರ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ,,ಮಹೇಶ್ ಪ್ರಭು, ಕರೀಂ, ಕಾರ್ಮಿಕ ಮುಂದಾಳುಗಳಾದ ರಮಣಿ, ಲಕ್ಷ್ಮಿ ಮೂಡಬಿದ್ರೆ, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ರೈತ ಸಂಘದ ಲಿಯೋ ನಝರತ್, ಓಲ್ವಿನ್ ಮೆನೇಜಸ್, ಸುಂದರ ಶೆಟ್ಟಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ‌ ಆಸಿಫ್ ಮೂಡಬಿದ್ರೆ, ಸಾಮಾಜಿಕ ಕಾರ್ಯಕರ್ತರಾದ ಹೇಮಲತಾ, ಮಾನಸಿ ಶೆಟ್ಟಿ, ನಿಸಾರ್ ಕರಾವಳಿ, ಸಿರಾಜ್ ಬಜ್ಪೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು