7:22 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರೋಗಿಗಳ ಮಾನಸಿಕ ಆರೋಗ್ಯಕ್ಕೆ ಸಮುದಾಯ ವಾಚನಾಲಯ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್

10/10/2022, 20:30

ಮಂಗಳೂರು(reporterkarnataka.com): ರೋಗಿಗಳ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯಕ್ಕಾಗಿ ಓದುವ ಹವ್ಯಾಸ ಉತ್ತಮ. ಈ ನಿಟ್ಟಿನಲ್ಲಿ ಸಮುದಾಯ ವಾಚನಾಲಯ ಸಹಕಾರಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ) ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಆರಂಭಗೊಂಡ ಸಮುದಾಯ ವಾಚನಾಲಯದ ನವೀಕೃತ ಕೊಠಡಿಯ ಉದ್ಘಾಟನೆ ಮತ್ತು ಪತ್ರಿಕಾ ವಿತರಣಾ ವಾಹಕ (ಟ್ರಾಲಿ ) ಸಮರ್ಪಣಾ ಕಾರ್ಯಕ್ರ ಮದ ನೆರವೇರಿಸಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿದಿನ ನೂರಾರು ರೋಗಿಗಳು ಆಗಮಿಸುತ್ತಿದ್ದಾರೆ. ಅವರಿಗೆ ಸಹಾಯಕರಾಗಿಯೂ ಸಾಕಷ್ಟು ಮಂದಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಅವರಿಗೆ ಓದಲು ಪುಸ್ತಕ, ಪತ್ರಿಕೆ ಓದಲು ಸಮು ದಾಯ ವಾಚನಾಲಯದ ಮೂಲಕ ಮಾಡುವ ಯೋಜನೆ ಶ್ಲಾಘನೀಯ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪತ್ರಿಕಾ ವಿತರಣಾ ವಾಹನ ಸಮರ್ಪಣಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆಯ ಸಭಾಪತಿ ಶಾಂತರಾಮ ಶೆಟ್ಟಿ ,ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ.ಸದಾಶಿವ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವೆನ್ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಆರ್. ಕಾಮತ್, ದ.ಕ ಜಿಲ್ಲಾ ರೆಡ್ ಕ್ರಾಸ್ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ,ಆಡಳಿತ ಮಂಡಳಿ ಸಮಿತಿ ಸದಸ್ಯೆ ಡಾ.ಸುಮನಾ ಬೋಳಾರ್, ಸದಸ್ಯ ರಾದ ರವೀಂದ್ರ ನಾಥ ಉಚ್ಚಿಲ್ ,ಪುಷ್ಪ ರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ, ಮಾಜಿ ಮಾನಪ ಸದಸ್ಯ ಪದ್ಮನಾಭ ಅಮೀನ್ ,ಮಂಗಳೂರು ರಥ ಬೀದಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಉಪಸ್ಥಿತರಿದ್ದು ರೋಗಿಗ ಳಿಗೆ ನಿಯತಕಾಲಿಕ ಪತ್ರಿಕೆಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು