2:57 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ರೋಗಿಗಳ ಮಾನಸಿಕ ಆರೋಗ್ಯಕ್ಕೆ ಸಮುದಾಯ ವಾಚನಾಲಯ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್

10/10/2022, 20:30

ಮಂಗಳೂರು(reporterkarnataka.com): ರೋಗಿಗಳ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯಕ್ಕಾಗಿ ಓದುವ ಹವ್ಯಾಸ ಉತ್ತಮ. ಈ ನಿಟ್ಟಿನಲ್ಲಿ ಸಮುದಾಯ ವಾಚನಾಲಯ ಸಹಕಾರಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ) ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಆರಂಭಗೊಂಡ ಸಮುದಾಯ ವಾಚನಾಲಯದ ನವೀಕೃತ ಕೊಠಡಿಯ ಉದ್ಘಾಟನೆ ಮತ್ತು ಪತ್ರಿಕಾ ವಿತರಣಾ ವಾಹಕ (ಟ್ರಾಲಿ ) ಸಮರ್ಪಣಾ ಕಾರ್ಯಕ್ರ ಮದ ನೆರವೇರಿಸಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿದಿನ ನೂರಾರು ರೋಗಿಗಳು ಆಗಮಿಸುತ್ತಿದ್ದಾರೆ. ಅವರಿಗೆ ಸಹಾಯಕರಾಗಿಯೂ ಸಾಕಷ್ಟು ಮಂದಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಅವರಿಗೆ ಓದಲು ಪುಸ್ತಕ, ಪತ್ರಿಕೆ ಓದಲು ಸಮು ದಾಯ ವಾಚನಾಲಯದ ಮೂಲಕ ಮಾಡುವ ಯೋಜನೆ ಶ್ಲಾಘನೀಯ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪತ್ರಿಕಾ ವಿತರಣಾ ವಾಹನ ಸಮರ್ಪಣಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆಯ ಸಭಾಪತಿ ಶಾಂತರಾಮ ಶೆಟ್ಟಿ ,ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ.ಸದಾಶಿವ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವೆನ್ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಆರ್. ಕಾಮತ್, ದ.ಕ ಜಿಲ್ಲಾ ರೆಡ್ ಕ್ರಾಸ್ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ,ಆಡಳಿತ ಮಂಡಳಿ ಸಮಿತಿ ಸದಸ್ಯೆ ಡಾ.ಸುಮನಾ ಬೋಳಾರ್, ಸದಸ್ಯ ರಾದ ರವೀಂದ್ರ ನಾಥ ಉಚ್ಚಿಲ್ ,ಪುಷ್ಪ ರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ, ಮಾಜಿ ಮಾನಪ ಸದಸ್ಯ ಪದ್ಮನಾಭ ಅಮೀನ್ ,ಮಂಗಳೂರು ರಥ ಬೀದಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಉಪಸ್ಥಿತರಿದ್ದು ರೋಗಿಗ ಳಿಗೆ ನಿಯತಕಾಲಿಕ ಪತ್ರಿಕೆಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು