5:48 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ರೋಗಿಗಳ ಮಾನಸಿಕ ಆರೋಗ್ಯಕ್ಕೆ ಸಮುದಾಯ ವಾಚನಾಲಯ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್

10/10/2022, 20:30

ಮಂಗಳೂರು(reporterkarnataka.com): ರೋಗಿಗಳ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯಕ್ಕಾಗಿ ಓದುವ ಹವ್ಯಾಸ ಉತ್ತಮ. ಈ ನಿಟ್ಟಿನಲ್ಲಿ ಸಮುದಾಯ ವಾಚನಾಲಯ ಸಹಕಾರಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ) ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಆರಂಭಗೊಂಡ ಸಮುದಾಯ ವಾಚನಾಲಯದ ನವೀಕೃತ ಕೊಠಡಿಯ ಉದ್ಘಾಟನೆ ಮತ್ತು ಪತ್ರಿಕಾ ವಿತರಣಾ ವಾಹಕ (ಟ್ರಾಲಿ ) ಸಮರ್ಪಣಾ ಕಾರ್ಯಕ್ರ ಮದ ನೆರವೇರಿಸಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿದಿನ ನೂರಾರು ರೋಗಿಗಳು ಆಗಮಿಸುತ್ತಿದ್ದಾರೆ. ಅವರಿಗೆ ಸಹಾಯಕರಾಗಿಯೂ ಸಾಕಷ್ಟು ಮಂದಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಅವರಿಗೆ ಓದಲು ಪುಸ್ತಕ, ಪತ್ರಿಕೆ ಓದಲು ಸಮು ದಾಯ ವಾಚನಾಲಯದ ಮೂಲಕ ಮಾಡುವ ಯೋಜನೆ ಶ್ಲಾಘನೀಯ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪತ್ರಿಕಾ ವಿತರಣಾ ವಾಹನ ಸಮರ್ಪಣಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆಯ ಸಭಾಪತಿ ಶಾಂತರಾಮ ಶೆಟ್ಟಿ ,ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ.ಸದಾಶಿವ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವೆನ್ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಆರ್. ಕಾಮತ್, ದ.ಕ ಜಿಲ್ಲಾ ರೆಡ್ ಕ್ರಾಸ್ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ,ಆಡಳಿತ ಮಂಡಳಿ ಸಮಿತಿ ಸದಸ್ಯೆ ಡಾ.ಸುಮನಾ ಬೋಳಾರ್, ಸದಸ್ಯ ರಾದ ರವೀಂದ್ರ ನಾಥ ಉಚ್ಚಿಲ್ ,ಪುಷ್ಪ ರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ, ಮಾಜಿ ಮಾನಪ ಸದಸ್ಯ ಪದ್ಮನಾಭ ಅಮೀನ್ ,ಮಂಗಳೂರು ರಥ ಬೀದಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಉಪಸ್ಥಿತರಿದ್ದು ರೋಗಿಗ ಳಿಗೆ ನಿಯತಕಾಲಿಕ ಪತ್ರಿಕೆಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು