10:28 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು