8:10 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು