7:11 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ

12/10/2022, 10:13

ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ
ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂ ನಿರ್ವಸಿತರ ಹಿತರಕ್ಷಣ ಸಮಿತಿ ಒತ್ತಾಯಿಸಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಕುಟುಂಬದ ಜೊತೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಬೇಡಿಕೆ ಬಗ್ಗೆ ಚರ್ಚಿಸಲಾಯಿತು.

ಭೂಮಿಯನ್ನ ಕಳೆದುಕೊಳ್ಳುತ್ತಿರುವ ರೈತ ಮುಖಂಡರ ಜೊತೆ ಹಾಗೂ ನಾಲ್ಕನೇ ಹಂತದ ಎಂ ಆರ್ ಪಿ ಎಲ್ ಭೂಸ್ವಾಧೀನ ನಿರ್ವಸಿತರ ಸಮಿತಿಯ ಮುಖಂಡರ ಜೊತೆ ಅವರ ಅಹವಾಲುಗಳನ್ನು ಆಲಿಸಿದರು.
ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಈ ಹಿಂದೆ ಪುನರ್ ವಸತಿ ಕಾಲನಿಯಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಈ ಬಾರಿ ಅಂತಹ ಸಮಸ್ಯೆಯನ್ನು ನಿರ್ವಸಿತರು ಎದುರಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ನಿರ್ವಸಿತ ಕುಟುಂಬಕ್ಕೆ ಉದ್ಯೋಗಕ್ಕೆ ಪ್ರಾಮುಖ್ಯತೆ ನೀಡುವಂತೆ ಸಲಹೆ ನೀಡಿದರು.

ಶಾಸಕ ಉಮಾನಾಥ ಕೋಟ್ಯಾನ್ , ಹಿತ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಜೋಕಿಂ ಐವನ್ ಡೋನಿ ಸುವಾರೀಸ್, ಭೋಜರಾಜ್ ಸೂರಿಂಜೆ,ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಜಿ.ಕೆ ಪೂವಪ್ಪ, ಹೆನ್ರಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಕೇಶವ ಶೆಟ್ಟಿ, ಕಾರ್ಯದರ್ಶಿ ಹೇಮನಾಥ್, ಕೋಶಾಧಿಕಾರಿ ಕುಸುಮಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುರೇಶ್ ರಾಮ,ಕೃಷ್ಣಮೂರ್ತಿ, ಸಂಚಾಲಕ ಸ್ಟಾನಿ ಫೆರ್ನಾಂಡಿಸ್ , ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು