4:35 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪೇಜಾವರ ಶ್ರೀಗಳಿಂದ ಮಾಜಿ ಉಪ ಪ್ರಧಾನಿ ಅಡ್ವಾಣಿ ಭೇಟಿ: ಶ್ರೀಕೃಷ್ಣನ ಗಂಧ ಪ್ರಸಾದ, ಸ್ಮರಣಿಕೆ ಅರ್ಪಣೆ

12/10/2022, 21:41

ಹೊಸದಿಲ್ಲಿ(reporterkarnataka.com); ಉಡುಪಿ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್. ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯ ರಾಮ ಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು . ಶ್ತೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು.


ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು.ಅಡ್ವಾಣಿ ಅವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು.ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು.


ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ , ಕೃಷ್ಣ ಭಟ್ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು