6:07 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಪಾಲಿಕೆ ವಿಫಲ: ಆಯುಕ್ತರ ಕಚೇರಿ ಜಪ್ತಿಗೆ ಕೋರ್ಟ್ ಆದೇಶ

12/10/2022, 23:40

ಮಂಗಳೂರು(reporterkarnataka.com): ಉದ್ದೇಶಿತ ಪಂಪ್ ವೆಲ್ ಖಾಸಗಿ ಬಸ್ ನಿಲ್ಧಾಣಕ್ಕೆ ಸ್ವಾಧೀನಪಡಿಸಿಕೊಂಡ 7 ಎಕರೆ ಭೂಮಿಯ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಲ್ಲಿ ಮಂಗಳೂರು ಮಹಾನಗರಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ.

ನ್ಯಾಯಾಲಯದ ಸಿಬ್ಬಂದಿಗಳು ಬುಧವಾರ ಕಮಿಷನರ್ ಕಚೇರಿಗೆ ಜಪ್ತಿಗೆ ತೆರಳಿದ್ದು, ಪಾಲಿಕೆಯ ಕೋರಿಕೆ ಮೇರೆಗೆ ಪರಿಹಾರ ನೀಡಲು ಅ.25ರ ವರೆಗೆ ಕಾಲಾವಕಾಶ ನೀಡಿದೆ.

ಪಂಪ್ ವೆಲ್ ನಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು 2008ರಲ್ಲಿ 7 ಎಕರೆ ಭೂಮಿಯನ್ನು ಸ್ವಾಧೀನಪಡಿಸಲಾಗಿತ್ತು. ಆದರೆ ನಿಗದಿ ಪಡಿಸಿದ ಪರಿಹಾರದ ಬಗ್ಗೆ ಭೂಮಿ ಕಳೆದುಕೊಂಡ ಸಂತ್ರಸ್ತರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆಯೂ 2018ರಲ್ಲೇ ಕೋರ್ಟ್ ಆದೇಶ ನೀಡಿತ್ತು. ಆದರೆ ಪಾಲಿಕೆ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿ ಜಫ್ತಿ ಮಾಡುವಂತೆ ಆದೇಶ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು