4:02 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ಸಾವಿಗೆ ಶರಣಾದ ರಾಷ್ಟ್ರೀಕೃತ ಬ್ಯಾಂಕಿನ ಲೇಡಿ ಮೆನೇಜರ್ ; ಹಿರಿಯ ಅಧಿಕಾರಿಗಳ ಕಿರುಕುಳ ಕಾರಣವೇ?

13/10/2022, 15:53

ಮಂಗಳೂರು(reporterkarnataka.com) : ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮಹಿಳಾ ಮೆನೇಜರ್
ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ.

ಸಾವಿಗೆ ಶರಣಾದ ಬ್ಯಾಂಕ್ ಮೆನೇಜರ್ ಅವರನ್ನು ಪದ್ಮಾವತಿ(52) ಎಂದು ಗುರುತಿಸಲಾಗಿದೆ. ಇವರು ಬ್ಯಾಂಕಿನ ಬಿಜೈ ಶಾಖೆಯಲ್ಲಿ ವ್ಯವಸ್ಥಾಪಕಿಯಾಗಿದ್ದರು ಎಂದು ತಿಳಿದು ಬಂದಿದೆ.

ತಾನೂ ಇತ್ತೀಚೆಗಷ್ಟೇ ನಗರದ ಯೆಯ್ಯಾಡಿ ಬಳಿ ಖರೀದಿಸಿದ ಹೊಸ ಫ್ಲಾಟಿನಲ್ಲಿ ಪದ್ಮಾವತಿ ಅವರು ನೇಣಿಗೆ ಶರಣಾಗಿದ್ದಾರೆ. ಪದ್ಮಾವತಿ MIT ಯಲ್ಲಿ ವ್ಯಾಸಂಗ ಮಾಡುತ್ತಿರುವ ಓರ್ವ ಮಗ ಹಾಗೂ ಪತಿಯನ್ನು ಅಗಲಿದ್ದಾರೆ.

ಬ್ಯಾಂಕಿನ ಹಿರಿ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತುಗಳು ಆಕೆಯ ಆಪ್ತ ವಲಯದಲ್ಲಿ ಕೇಳಿ ಬರುತ್ತಿದ್ದು ಈ ಬಗ್ಗೆ ತನಿಖೆ ನಡೆಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಕೀಗಳನ್ನು ಗಂಡನ ಬಳಿ ಕಳಿಸಿಕೊಟ್ಟಿದ್ದರು ಮತ್ತು ನೈಲನ್ ದಾರದ ಬಗ್ಗೆ ವಿಚಾರಿಸಿದ್ದರು.

ಆಕೆಯ ತಂಗಿ ನಿನ್ನೆ ಕರೆ ಮಾಡಿದಾಗ ಕರೆ ಸ್ವೀಕರಿಸದ ಕಾರಣ ಪರಿಶೀಲನೆ ಮಾಡಿದಾಗ ಆಕೆ ನೂತನವಾಗಿ ಖರೀದಿಸಿದ ಫ್ಲಾಟಿನ ಫ್ಯಾನಿಗೆ ಆಗಲೇ ಕೊರಳೊಡ್ಡಿಯಾಗಿತ್ತು ಎನ್ನಲಾಗಿದೆ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು