12:02 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಂಗಳೂರು: ಸಾವಿಗೆ ಶರಣಾದ ರಾಷ್ಟ್ರೀಕೃತ ಬ್ಯಾಂಕಿನ ಲೇಡಿ ಮೆನೇಜರ್ ; ಹಿರಿಯ ಅಧಿಕಾರಿಗಳ ಕಿರುಕುಳ ಕಾರಣವೇ?

13/10/2022, 15:53

ಮಂಗಳೂರು(reporterkarnataka.com) : ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮಹಿಳಾ ಮೆನೇಜರ್
ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ.

ಸಾವಿಗೆ ಶರಣಾದ ಬ್ಯಾಂಕ್ ಮೆನೇಜರ್ ಅವರನ್ನು ಪದ್ಮಾವತಿ(52) ಎಂದು ಗುರುತಿಸಲಾಗಿದೆ. ಇವರು ಬ್ಯಾಂಕಿನ ಬಿಜೈ ಶಾಖೆಯಲ್ಲಿ ವ್ಯವಸ್ಥಾಪಕಿಯಾಗಿದ್ದರು ಎಂದು ತಿಳಿದು ಬಂದಿದೆ.

ತಾನೂ ಇತ್ತೀಚೆಗಷ್ಟೇ ನಗರದ ಯೆಯ್ಯಾಡಿ ಬಳಿ ಖರೀದಿಸಿದ ಹೊಸ ಫ್ಲಾಟಿನಲ್ಲಿ ಪದ್ಮಾವತಿ ಅವರು ನೇಣಿಗೆ ಶರಣಾಗಿದ್ದಾರೆ. ಪದ್ಮಾವತಿ MIT ಯಲ್ಲಿ ವ್ಯಾಸಂಗ ಮಾಡುತ್ತಿರುವ ಓರ್ವ ಮಗ ಹಾಗೂ ಪತಿಯನ್ನು ಅಗಲಿದ್ದಾರೆ.

ಬ್ಯಾಂಕಿನ ಹಿರಿ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತುಗಳು ಆಕೆಯ ಆಪ್ತ ವಲಯದಲ್ಲಿ ಕೇಳಿ ಬರುತ್ತಿದ್ದು ಈ ಬಗ್ಗೆ ತನಿಖೆ ನಡೆಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಕೀಗಳನ್ನು ಗಂಡನ ಬಳಿ ಕಳಿಸಿಕೊಟ್ಟಿದ್ದರು ಮತ್ತು ನೈಲನ್ ದಾರದ ಬಗ್ಗೆ ವಿಚಾರಿಸಿದ್ದರು.

ಆಕೆಯ ತಂಗಿ ನಿನ್ನೆ ಕರೆ ಮಾಡಿದಾಗ ಕರೆ ಸ್ವೀಕರಿಸದ ಕಾರಣ ಪರಿಶೀಲನೆ ಮಾಡಿದಾಗ ಆಕೆ ನೂತನವಾಗಿ ಖರೀದಿಸಿದ ಫ್ಲಾಟಿನ ಫ್ಯಾನಿಗೆ ಆಗಲೇ ಕೊರಳೊಡ್ಡಿಯಾಗಿತ್ತು ಎನ್ನಲಾಗಿದೆ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು