1:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ

14/10/2022, 09:47

ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್​ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

2018ರ ಚುನಾವಣೆಯಲ್ಲಿ ಗರುಡಾಚಾರ್ ಅವರು
ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.
ಗರುಡಾಚಾರ್ 2018 ರಲ್ಲಿ ಚಿಕ್ಕಪೇಟೆ ಚುನಾವಣೆಯ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದರು. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಪ್ರಕಾಶ್ ಶೆಟ್ಟಿ ಎಂಬುವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಉದಯ್ ಗರುಡಾಚಾರ್ ಅವರು ಶಿಕ್ಷೆ ಪ್ರಕಟವಾದ ಬಳಿಕ ಜಾಮೀನುಗಾಗಿ ಮನವಿ ಮಾಡಿದ್ದರು. ಇದನ್ನು ಪರಿಶೀಲಿಸಿದ ಕೋರ್ಟ್ ಜಾಮೀನು ನೀಡಿದೆ. 25,000 ರೂಪಾಯಿ ಬಾಂಡ್, ಶ್ಯುರಿಟಿ ಒದಗಿಸಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು