7:14 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ

14/10/2022, 10:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಹಲ್ಲೆಗೆ ಒಳಗಾಗಿರುವ ಬಂದೇನಮಾಜ ಮುಲ್ಲಾ ಹಾಗೂ ಅವರ ಸಂಬಂಧಿಕರು ಆರೋಪ ಮಾಡಿದ್ದಾರೆ.


ಬಂದೇನಮಾಜ ಮುಲ್ಲಾ ಕೆಲಸ ಮುಗಿಸಿಕೊಂಡು ಊರಿಗೆ ಬರುತ್ತಿರುವಾಗ ಕಾಗವಾಡ ಶಾಸಕ ಶ್ರಿಮಂತ ಪಾಟೀಲ ಅವರ ಆಪ್ತ, ಗ್ರಾ ಪಂ ಸದಸ್ಯ ಶಂಕರಗೌಡ ಪಾಟೀಲ್, ಸಂಗಡಿರಾದ ರಾಘವೇಂದ್ರ ಸಪ್ತಸಾಗರ್, ಗಂಗಪ್ಪ ಮಾಳಿ, ಬುಜುಗೌಡ ಪಾಟೀಲ್ ಎಂಬುವರು ಬಂದೇನಮಾಜ್ ಮುಲ್ಲಾ ಎಂಬುವರ ಮೇಲೆ ಮಧ್ಯದ ಅಮಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮಾರನೆಯ ದಿನ 7ನೇ ತಾರೀಕು ನಾಲ್ವರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ದೂರು ದಾಖಲಾಗಿದ್ದರು ಅಥಣಿ ಪೊಲೀಸರು ಆರೋಪಿಗಳ ಮೇಲೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಘಟನೆಯಾಗಿ ಒಂದು ವಾರ ಕಳೆದರೂ FIR ಪ್ರತಿ ನೀಡುತ್ತಿಲ್ಲ ಹಾಗೂ ಅಥಣಿ ಪೊಲೀಸರು ರಾಜಕೀಯ ವ್ಯಕ್ತಿಗಳ ಬೆನ್ನಿಗೆ ನಿಂತಿದ್ದಾರೆ ಎಂದು ಅಥಣಿ ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿ ಪದೇ ಪದೇ ಪೊಲೀಸ್ ಠಾಣೆಗೆ ನ್ಯಾಯ ಕೊಡಿಸುವಂತೆ ಹೋಗುತ್ತಿದ್ದಂತೆ ಶಾಸಕ ಶ್ರೀಮಂತ ಪಾಟೀಲ್ ಆಪ್ತ ಸಲಹೆಗಾರ ರಾಜು ಮಾನೆ ಎಂಬುವರು ದೂರು ವಾಪಸ್ ತೆಗೆದುಕೋ ಇಲ್ಲವಾದರೆ ನಾವು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಹಾಗೂ ಗುಂಡಾ ವರ್ತನೆ ತೋರುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್ ಅಭಿವೃದ್ಧಿ ಕಾರ್ಯಗಳಲ್ಲಿ ನಿರತರಾದರೆ, ಕೆಲವರು ಶಾಸಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಗ್ರಾಮದಲ್ಲಿ ಮೆರೆಯುತ್ತಿದ್ದಾರೆ ಶಾಸಕರು ಇಂಥವರಿಗೆ ಕಡಿವಾಣ ಹಾಕುವಂತೆ ಪ್ರಜ್ಞಾವಂತರು ಆಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು