12:41 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು

30/06/2021, 07:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು.

ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಳೆದ ಎರಡು ಮೂರು ದಿನದಿಂದ ಹಾಲು ನೀರು ಪ್ರಕರಣದ ಆಡಿಯೋ ವೈರಲ್ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಜವರೇಗೌಡರು ಮಾತನಾಡಿರುವ ವಿಚಾರದ ಬಗ್ಗೇ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನಮಗಿಲ್ಲದಿದ್ದರೆ ಬಹಿರಂಗವಾಗಿ ಕ್ಷಮೆಕೋರುತ್ತ  ಪ್ರಸ್ತುತ ಒಕ್ಕೂಟದಲ್ಲಿ ನಡೆಯುತ್ತಿರುವ ಪ್ರಕರಣ ಈಗಾಗಲೇ ಬೆಳಕಿಗೆ ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಜಿಲ್ಲೆಯ ರೈತರಿಗೆ ಮನವರಿಕೆ ಮಾಡಲು  ಹಾಲು  ಒಕ್ಕೂಟದ  ಪ್ರಕರಣದ ಬಗ್ಗೆ ಜಿಲ್ಲೆಯ ಒಕ್ಕೂಟದ ಮಾಜಿ ಅಧ್ಯಕ್ಷರುಗಳು ಹಾಗೂ ಹಾಲು ಒಕ್ಕೂಟ ಉಳಿಸುವ ಸಂಬಂಧ ಅನೇಕರು ನಮ್ಮ ಅಭಿಪ್ರಾಯವನ್ನು ಪಡೆದಿದ್ದಾರೆ.

ಇದರ ಬಗ್ಗೆ ಯಾವ ರಾಜಕಾರಣವು ಇಲ್ಲದೇ ಹೋರಾಟಕ್ಕೆ ನಾವುಗಳು ಕೈಜೋಡಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ಈ  ಪ್ರಕರಣದಿಂದ ಮತ್ತೊಮ್ಮೆ ಜವರೇಗೌಡರಿಗೆ ಅಧಿಕಾರದ ಆಸೆ ಇದೆ ಎಂಬುದು ಸುಳ್ಳು. ಮತ್ತೊಮ್ಮೆ ನಮಗೆ ಯಾವುದೇ ಅಧಿಕಾರ ಬೇಡವಾಗಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹಾಲು ನೀರು ಪ್ರಕರಣ ಪ್ರಕರಣವನ್ನು ದಾರಿತಪ್ಪಿಸುವ ಯೋಜನೆಗೆ ಮುಂಚಿತವಾಗಿ ಹೋರಾಟದ ಅನಿವಾರ್ಯತೆ ಯಾಗಿರುವುದರಿಂದ ಮಂಡ್ಯ ಜಿಲ್ಲೆ ರೈತರ ಪರವಾಗಿ ಹೋರಾಟದ ಅನಿವಾರ್ಯತೆ ಇದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು