4:05 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು

30/06/2021, 07:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು.

ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಳೆದ ಎರಡು ಮೂರು ದಿನದಿಂದ ಹಾಲು ನೀರು ಪ್ರಕರಣದ ಆಡಿಯೋ ವೈರಲ್ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಜವರೇಗೌಡರು ಮಾತನಾಡಿರುವ ವಿಚಾರದ ಬಗ್ಗೇ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನಮಗಿಲ್ಲದಿದ್ದರೆ ಬಹಿರಂಗವಾಗಿ ಕ್ಷಮೆಕೋರುತ್ತ  ಪ್ರಸ್ತುತ ಒಕ್ಕೂಟದಲ್ಲಿ ನಡೆಯುತ್ತಿರುವ ಪ್ರಕರಣ ಈಗಾಗಲೇ ಬೆಳಕಿಗೆ ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಜಿಲ್ಲೆಯ ರೈತರಿಗೆ ಮನವರಿಕೆ ಮಾಡಲು  ಹಾಲು  ಒಕ್ಕೂಟದ  ಪ್ರಕರಣದ ಬಗ್ಗೆ ಜಿಲ್ಲೆಯ ಒಕ್ಕೂಟದ ಮಾಜಿ ಅಧ್ಯಕ್ಷರುಗಳು ಹಾಗೂ ಹಾಲು ಒಕ್ಕೂಟ ಉಳಿಸುವ ಸಂಬಂಧ ಅನೇಕರು ನಮ್ಮ ಅಭಿಪ್ರಾಯವನ್ನು ಪಡೆದಿದ್ದಾರೆ.

ಇದರ ಬಗ್ಗೆ ಯಾವ ರಾಜಕಾರಣವು ಇಲ್ಲದೇ ಹೋರಾಟಕ್ಕೆ ನಾವುಗಳು ಕೈಜೋಡಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ಈ  ಪ್ರಕರಣದಿಂದ ಮತ್ತೊಮ್ಮೆ ಜವರೇಗೌಡರಿಗೆ ಅಧಿಕಾರದ ಆಸೆ ಇದೆ ಎಂಬುದು ಸುಳ್ಳು. ಮತ್ತೊಮ್ಮೆ ನಮಗೆ ಯಾವುದೇ ಅಧಿಕಾರ ಬೇಡವಾಗಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹಾಲು ನೀರು ಪ್ರಕರಣ ಪ್ರಕರಣವನ್ನು ದಾರಿತಪ್ಪಿಸುವ ಯೋಜನೆಗೆ ಮುಂಚಿತವಾಗಿ ಹೋರಾಟದ ಅನಿವಾರ್ಯತೆ ಯಾಗಿರುವುದರಿಂದ ಮಂಡ್ಯ ಜಿಲ್ಲೆ ರೈತರ ಪರವಾಗಿ ಹೋರಾಟದ ಅನಿವಾರ್ಯತೆ ಇದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು