7:42 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು

30/06/2021, 07:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು.

ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಳೆದ ಎರಡು ಮೂರು ದಿನದಿಂದ ಹಾಲು ನೀರು ಪ್ರಕರಣದ ಆಡಿಯೋ ವೈರಲ್ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಜವರೇಗೌಡರು ಮಾತನಾಡಿರುವ ವಿಚಾರದ ಬಗ್ಗೇ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನಮಗಿಲ್ಲದಿದ್ದರೆ ಬಹಿರಂಗವಾಗಿ ಕ್ಷಮೆಕೋರುತ್ತ  ಪ್ರಸ್ತುತ ಒಕ್ಕೂಟದಲ್ಲಿ ನಡೆಯುತ್ತಿರುವ ಪ್ರಕರಣ ಈಗಾಗಲೇ ಬೆಳಕಿಗೆ ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಜಿಲ್ಲೆಯ ರೈತರಿಗೆ ಮನವರಿಕೆ ಮಾಡಲು  ಹಾಲು  ಒಕ್ಕೂಟದ  ಪ್ರಕರಣದ ಬಗ್ಗೆ ಜಿಲ್ಲೆಯ ಒಕ್ಕೂಟದ ಮಾಜಿ ಅಧ್ಯಕ್ಷರುಗಳು ಹಾಗೂ ಹಾಲು ಒಕ್ಕೂಟ ಉಳಿಸುವ ಸಂಬಂಧ ಅನೇಕರು ನಮ್ಮ ಅಭಿಪ್ರಾಯವನ್ನು ಪಡೆದಿದ್ದಾರೆ.

ಇದರ ಬಗ್ಗೆ ಯಾವ ರಾಜಕಾರಣವು ಇಲ್ಲದೇ ಹೋರಾಟಕ್ಕೆ ನಾವುಗಳು ಕೈಜೋಡಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ಈ  ಪ್ರಕರಣದಿಂದ ಮತ್ತೊಮ್ಮೆ ಜವರೇಗೌಡರಿಗೆ ಅಧಿಕಾರದ ಆಸೆ ಇದೆ ಎಂಬುದು ಸುಳ್ಳು. ಮತ್ತೊಮ್ಮೆ ನಮಗೆ ಯಾವುದೇ ಅಧಿಕಾರ ಬೇಡವಾಗಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹಾಲು ನೀರು ಪ್ರಕರಣ ಪ್ರಕರಣವನ್ನು ದಾರಿತಪ್ಪಿಸುವ ಯೋಜನೆಗೆ ಮುಂಚಿತವಾಗಿ ಹೋರಾಟದ ಅನಿವಾರ್ಯತೆ ಯಾಗಿರುವುದರಿಂದ ಮಂಡ್ಯ ಜಿಲ್ಲೆ ರೈತರ ಪರವಾಗಿ ಹೋರಾಟದ ಅನಿವಾರ್ಯತೆ ಇದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು