2:40 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು?

14/10/2022, 18:24

ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ…

ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇಳೆ ಫರಂಗಿಪೇಟೆ ಸಮೀಪ ಸ್ಕಾರ್ಪಿಯೊ ವಾಹನ ಓವರ್ ಟೇಕ್ ಮಾಡಿ ನನ್ನ ಸರಕಾರಿ ಕಾರಿಗೆ ಎರಡು ಬಾರಿ ತಲ್ವಾರ್ ದಾಳಿ ಮಾಡಲಾಯಿತು.

ನಾನು ಸ್ನೇಹಿತನ ಐ20 ಕಾರಿನಲ್ಲಿದ್ದೆ, ನಾನು ಸರಕಾರಿ ಕಾರಿನಲ್ಲಿ ಇಲ್ಲ ಎಂದು ಗೊತ್ತಾದ ಮೇಲೆ ಐ20 ಕಾರಿ‌ನ ಮೇಲೆ ದಾಳಿ ಮಾಡಿದ್ದಾನೆ. ಕಾರಿನಲ್ಲಿ ಒಬ್ಬನೇ ಇದ್ದು, ಡ್ರೈವ್ ಮಾಡಿಕೊಂಡು ಎರಡು ಬಾರಿ ತಲವಾರು ದಾಳಿಗೆ ಯತ್ನಿಸಿದ್ದ, ಹಾಗೆ ಕಾರಿನಿಂದ ಇಳಿಯಲು ಯತ್ನಿಸಿದ್ದ ಎಂದು ಶಾಸಕರು ಹೇಳಿದ್ದಾರೆ.

ದಾಳಿಗೆ ಬಳಸಿದ ಕಾರು ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು. ಯಶಸ್ವಿ ಹಾಲ್ ಬಳಿಕ ನಾನು ಡಿವೈಎಸ್ಪಿಗೆ ಮಾಹಿತಿ ನೀಡಿದ್ದೆ.ಬಳಿಕ ಎರಡು ಪ್ಯಾಸೆಂಜರ್ ಕಾರಿನ ಜೊತೆ ತಲವಾರು ದಾಳಿಗೆ ಉತ್ನಿಸಿದವನ ಕಾರು ತೆರಳಿದೆ ಎಂದು ಹೇಳಿದ್ದಾರೆ.

ದಾಳಿ ಕುರಿತು ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಎರಡೆರಡು ಬಾರಿ ಅವರು ಕರೆ ಮಾಡಿದ್ದಾರೆ. ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಈ ಕುರಿತು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂಜಾನೆ 2 ಗಂಟೆಗೆ ಕೇಸ್ ದಾಖಲು ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ಗೃಹ ಸಚಿವರು ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ, ನನಗೆ ಅಂಗರಕ್ಷಕರನ್ನು ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು