12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉತ್ತರಾಖಂಡ: ಕುಖ್ಯಾತ ಕ್ರಿಮಿನಲ್ ಗೆ ಹಾರಿಸಿದ ಪೊಲೀಸರ ಗುಂಡಿಗೆ ಬಿಜೆಪಿ ನಾಯಕನ ಪತ್ನಿ ಬಲಿ

14/10/2022, 22:16

ಡೆಹ್ರಾಡೂನ್(reporter Karnataka.com): ಪೊಲೀಸರು ಗುರುವಾರ ಸಂಜೆ ವಾಂಟೆಡ್ ಕ್ರಿಮಿನಲ್ ಅನ್ನು ಬೆನ್ನಟ್ಟುತ್ತಿದ್ದಾಗ ನಡೆದ ಗುಂಡಿನ ಚಕಮಕಿಯಲ್ಲಿ ಬಿಜೆಪಿ ನಾಯಕನ ಪತ್ನಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕೊಲೆ ಆರೋಪ ಹಾಕಲಾಗಿದೆ. ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳ ತಂಡ ನೆರೆಯ ಉತ್ತರಾಖಂಡದಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ.
ಸ್ಥಳೀಯ ಬಿಜೆಪಿ ನಾಯಕ ಗುರ್ತಾಜ್ ಭುಲ್ಲರ್ ಅವರ ಪತ್ನಿ ಗುರುಪ್ರೀತ್ ಕೌರ್ (28) ಪೊಲೀಸರ ಗುಂಡಿನ ಚಕಮಕಿಗೆ ಬಲಿಯಾದ ಮಹಿಳೆ. ಈ ಘಟನೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಐವರು ಪೊಲೀಸರು ಗಾಯಗೊಂಡಿದ್ದಾರೆ. ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳ ಪೊಲೀಸರ ನಡುವೆ ಇದೀಗ ಕಾಳಗ ಏರ್ಪಟ್ಟಿದೆ.ಉತ್ತರಾಖಂಡದ ಜಸ್‌ಪುರದ ಗ್ರಾಮವೊಂದಕ್ಕೆ ಬುಧವಾರ ಉತ್ತರಾಖಂಡದ ಜಸ್‌ಪುರದ ಗ್ರಾಮವೊಂದಕ್ಕೆ ತೆರಳಿದ್ದ ಉತ್ತರಾಖಂಡದ ಪೊಲೀಸ್‌ ತಂಡ, ಮೈನಿಂಗ್‌ ಮಾಫಿಯಾದ ಜಾಫರ್‌ ಎಂಬ ಕ್ರಿಮಿನಲ್‌ನನ್ನು ಹಿಡಿಯಲು ತೆರಳಿದ್ದು, ಆತನ ತಲೆಗೆ ₹ 50,000 ಬಹುಮಾನ ಘೋಷಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು