6:00 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆ‌‌ಕೊಳೆ ರೋಗ

15/10/2022, 10:27

ರಾಹುಲ್ ಅಥಣಿ ಬೆಳಗಾವಿ

info.reporter Karnataka gmail.com

ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ.
ಅಥಣಿ ತಾಲೂಕಿನ ಸುಮಾರು 23 ಸಾವಿರ ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಿದೆ, ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದ ಬಹುತೇಕ ರೈತರಿಗೆ ದ್ರಾಕ್ಷಿ ಬೆಳೆಯೇ ಜೀವನಾಧಾರ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ದ್ರಾಕ್ಷಿ ಗಿಡಗಳನ್ನು ಚಾಟ್ನಿ ಮಾಡಲಾಗಿದೆ. ಬಹಳಷ್ಟು ತೋಟಗಳಲ್ಲಿ ಈಗಾಗಲೇ ಹೂಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನ ಅಗತ್ಯ.
ಆದರೆ ಸುರಿಯುತ್ತಿರುವುದರಿಂದ ಈಗ ಮಳೆ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುತ್ತಿವೆ. ಹೂವುಗಳು ಉದುರುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಚಾಟಿ ಮಾಡಿದ ತೋಟಗಳಲ್ಲಿ ಈಗಷ್ಟೇ ಹೂವು ಮೂಡುತ್ತಿದ್ದು ಅದಕ್ಕೂ ಡೌನಿ ರೋಗ ಬರುವ ಆತಂಕ ಎದುರಾಗಿದೆ.


ತಾಲೂಕಿನ ಅರಟಾಳ, ಬಾಡಗಿ, ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಸೇರಿದಂತೆ ತೆಲಸಂಗ ಹೋಬಳಿಯ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗುಲಿದೆ. ದ್ರಾಕ್ಷಿ ಗೊನೆಯಲ್ಲಿ ನೀರು ನಿಲ್ಲುವುದರಿಂದ ಗೊನೆಗಳು ಕೊಳೆಯುತ್ತವೆ. ಎಷ್ಟು ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಭಿಮತ.

ಇತ್ತೀಚಿನ ಸುದ್ದಿ

ಜಾಹೀರಾತು