11:47 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಶಿರೂರು: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

16/10/2022, 10:28

ಶಿರೂರು(reporterkarnataka.com): ಶಿರೂರು ಕೆಳಪೇಟೆಯಲ್ಲಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ರವಿ ಮೇಸ್ತ ಎಂದು ಗುರುತಿಸಲಾಗಿದೆ.

ರವಿ ಮೇಸ್ತ ಅವರು ಶಿರೂರು ಮೇಲ್ಪೇಟೆ ಕಡೆಯಿಂದ ಹೆದ್ದಾರಿಯ ಪೂರ್ವ ದಿಕ್ಕಿನಲ್ಲಿ ಬಂದು ಶಿರೂರು ಕೆಳಪೇಟೆಯ ಯೂ-ಟರ್ನ್ ಬಳಿ ರಸ್ತೆಯನ್ನು ದಾಟಲು ತಮ್ಮ ಬೈಕ್ ನ್ನು ನಿಲ್ಲಿಸಿ ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಹೆದ್ದಾರಿಯ ಪಶ್ಚಿಮ ಬದಿಯ ರಸ್ತೆಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಚಾಲಕ ಮೈನುದ್ದೀನ್ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ಪರಿಣಾಮ ರವಿ ಮೇಸ್ತ ಅವರು ಬೈಕ್ ಸಮೇತ ಲಾರಿಯ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ಲಾರಿ ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಉಸಿರುಚೆಲ್ಲಿದ್ದಾರೆ. ಈ ಬಗ್ಗೆ ಶಿರೂರಿನ ನಾಗರಾಜ ಮೇಸ್ತ ಎಂಬವರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು