2:40 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಜನಸ್ಪಂದನಾ; ಫಲಾನುಭವಿಗಳಿಗೆ ವಾಹನ, ಚೆಕ್ , ಮನೆ ಮಂಜೂರಾತಿ ಪತ್ರ ವಿತರಣೆ

17/10/2022, 13:03

ಸುರತ್ಕಲ್ (reporterkarnataka.com): ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು.

1200 ರಷ್ಟು ನಾಗರಿಕರು ಭಾಗವಹಿಸಿದ, 30ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಾಹನ, ಸರಕಾರದ ಹಲವು ಯೋಜನೆಗಳ ಸಹಾಯಧನದ ಚೆಕ್ ವಿತರಣೆ, ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು.
ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೂ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ನಮ್ಮ ಕ್ಷೇತ್ರದ ಏಳು ಕಡೆ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯ ಇಲಾಖೆಯಿಂದ ಹಿಡಿದು ಕಾರ್ಮಿಕ ಇಲಾಖೆಯನ್ನು ಸೇರಿಸಿ ಕಂದಾಯ ಇಲಾಖೆಯ ತನಕ ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿ ಪರಿಹಾರ ನೀಡುವಂತೆ ಮಾಡಲಾಗಿದೆ. ಹಕ್ಕುಪತ್ರ, ಮಾಸಾಶನ, ಪಿಂಚಣಿ, ವಿಕಲಚೇತನ ಸವಲತ್ತು, ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಸಹಿತ ಎಲ್ಲವೂ ಇಲ್ಲಿ ಶೀಘ್ರದಲ್ಲಿ ಮಾಡಿಕೊಡಲಾಗುತ್ತದೆ. ಯಾವುದೇ ಕಾರಣಕ್ಕೆ ಒಂದು ದಿನದಲ್ಲಿ ಪರಿಹಾರ ಆಗದ ಸಮಸ್ಯೆ ಇದ್ದರೆ ಇಲಾಖೆ ಅಧಿಕಾರಿಗಳೊಂದಿಗೆ ಕಾರಣ ಚರ್ಚಿಸಿ ವಾರದೊಳಗೆ ಮನೆ, ಕಚೇರಿಗೆ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದ್ದಾರೆ.

ಅವರು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಪರಿಸರದ ಆರು ವಾರ್ಡ್ ಗಳನ್ನು ಒಳಗೊಂಡ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಒಂದು ವೇಳೆ ಇಲ್ಲಿರುವ ಯಾವ ಇಲಾಖೆಯಲ್ಲಿಯೂ ಸಮಸ್ಯೆಗೆ ಪರಿಹಾರ ಸಿಗದೇ ಇದ್ದಲ್ಲಿ ತಮ್ಮ ಆಪ್ತಸಹಾಯಕರ ಬಳಿ ತಿಳಿಸಿದ್ದಲ್ಲಿ ತಮ್ಮ ಶಾಸಕರ ಕಚೇರಿಯಿಂದ ಫಾಲೋ ಅಪ್ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು