8:34 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಚರಂಡಿ ಕಾಮಗಾರಿ: ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ

17/10/2022, 23:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka.com

ಕೊಟ್ಟಿಗೆಹಾರ ಸಮೀಪದ ಬಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ.

ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿ ಕಳಪೆಗುಣಮಟ್ಟದ್ದಾಗಿದ್ದು, ನಿರ್ಮಾಣಗೊಂಡ ಕೆಲವೇ ದಿನದಲ್ಲಿ ಕುಸಿದುಬಿದ್ದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ.

ಚರಂಡಿ ಮಾತ್ರವಲ್ಲದೇ ಸ್ಮಶಾನ ಸುತ್ತ ಟ್ರಂಚಿಂಗ್ ಕಾಮಗಾರಿಯಲ್ಲಿ ಅವೈಜ್ಞಾನಿಕವಾಗಿ ಟ್ರಂಚ್‌ನ ಅಗಲ ಜಾಸ್ತಿ ಮಾಡಿ, ಸಮರ್ಪಕ ನೀರಿನ ಓಟ ನೀಡದಿರುವುದು ಕೂಡ ಮೇಲುನೋಟಕ್ಕೆ ಕಳಪೆ ಕಾಮಗಾರಿಯಂತಾಗಿದೆ ಎಂದು ಆರೋಪಿಸಿದ್ದಾರೆ.

ಪ್ರತಿ ವರ್ಷ ಪಂಚಾಯಿತಿ ಮಟ್ಟದ ಲೆಕ್ಕಪತ್ರಕ್ಕೆ ಸಂಬಂಧಪಟ್ಟಂತೆ ಆಡಿಟ್ ನಡೆಯುತ್ತಿದ್ದರು ಕೂಡ ಗುತ್ತಿಗೆದಾರರು ಯಾವುದೇ ಅಂಜಿಕೆ ಇಲ್ಲದೆ ಇಂತಹ ಕಳಪೆ ಕಾಮಗಾರಿಗಳನ್ನು ನಡೆಸುತ್ತಿರುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮತ್ತು ಅಧ್ಯಕ್ಷಾರಾದಿಯಾಗಿ ಚುನಾಯಿತ ಪ್ರತಿನಿಧಿಗಳ ಬಗ್ಗೆ ಜನಸಾಮಾನ್ಯರಲ್ಲಿ ಸಂಶಯ ಮೂಡುವಂತಿದೆ.

ಆಡಳಿತ ವ್ಯವಸ್ಥೆಯ ಬಗ್ಗೆಯೇ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಗುಣಮಟ್ಟದ ಬಗ್ಗೆ ಮತ್ತು ಕಳಪೆ ಕಾಮಗಾರಿಯ ಬಾಗವಾಗಿರುವ ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು