12:35 AM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಚರಂಡಿ ಕಾಮಗಾರಿ: ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ

17/10/2022, 23:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka.com

ಕೊಟ್ಟಿಗೆಹಾರ ಸಮೀಪದ ಬಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ.

ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿ ಕಳಪೆಗುಣಮಟ್ಟದ್ದಾಗಿದ್ದು, ನಿರ್ಮಾಣಗೊಂಡ ಕೆಲವೇ ದಿನದಲ್ಲಿ ಕುಸಿದುಬಿದ್ದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ.

ಚರಂಡಿ ಮಾತ್ರವಲ್ಲದೇ ಸ್ಮಶಾನ ಸುತ್ತ ಟ್ರಂಚಿಂಗ್ ಕಾಮಗಾರಿಯಲ್ಲಿ ಅವೈಜ್ಞಾನಿಕವಾಗಿ ಟ್ರಂಚ್‌ನ ಅಗಲ ಜಾಸ್ತಿ ಮಾಡಿ, ಸಮರ್ಪಕ ನೀರಿನ ಓಟ ನೀಡದಿರುವುದು ಕೂಡ ಮೇಲುನೋಟಕ್ಕೆ ಕಳಪೆ ಕಾಮಗಾರಿಯಂತಾಗಿದೆ ಎಂದು ಆರೋಪಿಸಿದ್ದಾರೆ.

ಪ್ರತಿ ವರ್ಷ ಪಂಚಾಯಿತಿ ಮಟ್ಟದ ಲೆಕ್ಕಪತ್ರಕ್ಕೆ ಸಂಬಂಧಪಟ್ಟಂತೆ ಆಡಿಟ್ ನಡೆಯುತ್ತಿದ್ದರು ಕೂಡ ಗುತ್ತಿಗೆದಾರರು ಯಾವುದೇ ಅಂಜಿಕೆ ಇಲ್ಲದೆ ಇಂತಹ ಕಳಪೆ ಕಾಮಗಾರಿಗಳನ್ನು ನಡೆಸುತ್ತಿರುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮತ್ತು ಅಧ್ಯಕ್ಷಾರಾದಿಯಾಗಿ ಚುನಾಯಿತ ಪ್ರತಿನಿಧಿಗಳ ಬಗ್ಗೆ ಜನಸಾಮಾನ್ಯರಲ್ಲಿ ಸಂಶಯ ಮೂಡುವಂತಿದೆ.

ಆಡಳಿತ ವ್ಯವಸ್ಥೆಯ ಬಗ್ಗೆಯೇ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಗುಣಮಟ್ಟದ ಬಗ್ಗೆ ಮತ್ತು ಕಳಪೆ ಕಾಮಗಾರಿಯ ಬಾಗವಾಗಿರುವ ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು