4:44 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಚರಂಡಿ ಕಾಮಗಾರಿ: ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ

17/10/2022, 23:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka.com

ಕೊಟ್ಟಿಗೆಹಾರ ಸಮೀಪದ ಬಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ.

ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿ ಕಳಪೆಗುಣಮಟ್ಟದ್ದಾಗಿದ್ದು, ನಿರ್ಮಾಣಗೊಂಡ ಕೆಲವೇ ದಿನದಲ್ಲಿ ಕುಸಿದುಬಿದ್ದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ.

ಚರಂಡಿ ಮಾತ್ರವಲ್ಲದೇ ಸ್ಮಶಾನ ಸುತ್ತ ಟ್ರಂಚಿಂಗ್ ಕಾಮಗಾರಿಯಲ್ಲಿ ಅವೈಜ್ಞಾನಿಕವಾಗಿ ಟ್ರಂಚ್‌ನ ಅಗಲ ಜಾಸ್ತಿ ಮಾಡಿ, ಸಮರ್ಪಕ ನೀರಿನ ಓಟ ನೀಡದಿರುವುದು ಕೂಡ ಮೇಲುನೋಟಕ್ಕೆ ಕಳಪೆ ಕಾಮಗಾರಿಯಂತಾಗಿದೆ ಎಂದು ಆರೋಪಿಸಿದ್ದಾರೆ.

ಪ್ರತಿ ವರ್ಷ ಪಂಚಾಯಿತಿ ಮಟ್ಟದ ಲೆಕ್ಕಪತ್ರಕ್ಕೆ ಸಂಬಂಧಪಟ್ಟಂತೆ ಆಡಿಟ್ ನಡೆಯುತ್ತಿದ್ದರು ಕೂಡ ಗುತ್ತಿಗೆದಾರರು ಯಾವುದೇ ಅಂಜಿಕೆ ಇಲ್ಲದೆ ಇಂತಹ ಕಳಪೆ ಕಾಮಗಾರಿಗಳನ್ನು ನಡೆಸುತ್ತಿರುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮತ್ತು ಅಧ್ಯಕ್ಷಾರಾದಿಯಾಗಿ ಚುನಾಯಿತ ಪ್ರತಿನಿಧಿಗಳ ಬಗ್ಗೆ ಜನಸಾಮಾನ್ಯರಲ್ಲಿ ಸಂಶಯ ಮೂಡುವಂತಿದೆ.

ಆಡಳಿತ ವ್ಯವಸ್ಥೆಯ ಬಗ್ಗೆಯೇ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಗುಣಮಟ್ಟದ ಬಗ್ಗೆ ಮತ್ತು ಕಳಪೆ ಕಾಮಗಾರಿಯ ಬಾಗವಾಗಿರುವ ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು