5:47 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ

18/10/2022, 15:39

ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೊದಲು ಬಂಧಿಸಿ ಪಾಂಡೇಶ್ವರ ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುರತ್ಕಲ್ ಬಂಟರ ಭವನಕ್ಕೆ ಸ್ಥಳಾಂತರಿಸಲಾಯಿತತ್ ಉ.ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್‌, 250 ಸಿವಿಲ್‌, 4 ಮಂದಿ ಪೊಲೀಸ್ ಎಸಿಪಿ, 15 ಇನ್ಸ್ ಪೆಕ್ಟರ್‌ ಸೇರಿದಂತೆ 450 ಕ್ಕೂ ಅಧಿಕ ಪೊಲೀಸರ ಸರ್ಪಗವಲು ಹಾಕಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಎನ್‌. ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಟೋಲ್ ಗೇಟ್ ತೆರವು ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸಾವಿರಾರು ಮಂದಿ ಹೋರಾಟಗಾರರು ಆಗಮಿಸಿದ್ದಾರೆ.
ಹೋರಾಟದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸುನೀಲ್ ಕುಮಾರ್ ಬಜಾಲ್ , ಪ್ರತಿಭಾ ಕುಳಾಯಿ, ಮಾಜಿ ಶಾಸಕ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೋಯ್ದಿನ್ ಭಾವ, ಶಾಲೆಟ್ ಪಿಂಟೋ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ, ಶ್ರೀಧರ್ ಹೆಗಡೆ, ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸಂತೋಷ್ ಕುಮಾರ್ , ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿ ಮತ್ತಿತರರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು