5:31 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ

18/10/2022, 15:39

ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೊದಲು ಬಂಧಿಸಿ ಪಾಂಡೇಶ್ವರ ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುರತ್ಕಲ್ ಬಂಟರ ಭವನಕ್ಕೆ ಸ್ಥಳಾಂತರಿಸಲಾಯಿತತ್ ಉ.ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್‌, 250 ಸಿವಿಲ್‌, 4 ಮಂದಿ ಪೊಲೀಸ್ ಎಸಿಪಿ, 15 ಇನ್ಸ್ ಪೆಕ್ಟರ್‌ ಸೇರಿದಂತೆ 450 ಕ್ಕೂ ಅಧಿಕ ಪೊಲೀಸರ ಸರ್ಪಗವಲು ಹಾಕಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಎನ್‌. ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಟೋಲ್ ಗೇಟ್ ತೆರವು ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸಾವಿರಾರು ಮಂದಿ ಹೋರಾಟಗಾರರು ಆಗಮಿಸಿದ್ದಾರೆ.
ಹೋರಾಟದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸುನೀಲ್ ಕುಮಾರ್ ಬಜಾಲ್ , ಪ್ರತಿಭಾ ಕುಳಾಯಿ, ಮಾಜಿ ಶಾಸಕ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೋಯ್ದಿನ್ ಭಾವ, ಶಾಲೆಟ್ ಪಿಂಟೋ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ, ಶ್ರೀಧರ್ ಹೆಗಡೆ, ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸಂತೋಷ್ ಕುಮಾರ್ , ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿ ಮತ್ತಿತರರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು