4:57 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ

18/10/2022, 15:39

ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೊದಲು ಬಂಧಿಸಿ ಪಾಂಡೇಶ್ವರ ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುರತ್ಕಲ್ ಬಂಟರ ಭವನಕ್ಕೆ ಸ್ಥಳಾಂತರಿಸಲಾಯಿತತ್ ಉ.ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್‌, 250 ಸಿವಿಲ್‌, 4 ಮಂದಿ ಪೊಲೀಸ್ ಎಸಿಪಿ, 15 ಇನ್ಸ್ ಪೆಕ್ಟರ್‌ ಸೇರಿದಂತೆ 450 ಕ್ಕೂ ಅಧಿಕ ಪೊಲೀಸರ ಸರ್ಪಗವಲು ಹಾಕಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಎನ್‌. ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಟೋಲ್ ಗೇಟ್ ತೆರವು ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸಾವಿರಾರು ಮಂದಿ ಹೋರಾಟಗಾರರು ಆಗಮಿಸಿದ್ದಾರೆ.
ಹೋರಾಟದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸುನೀಲ್ ಕುಮಾರ್ ಬಜಾಲ್ , ಪ್ರತಿಭಾ ಕುಳಾಯಿ, ಮಾಜಿ ಶಾಸಕ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೋಯ್ದಿನ್ ಭಾವ, ಶಾಲೆಟ್ ಪಿಂಟೋ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ, ಶ್ರೀಧರ್ ಹೆಗಡೆ, ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸಂತೋಷ್ ಕುಮಾರ್ , ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿ ಮತ್ತಿತರರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು