11:49 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇಗುಲ: ಶ್ರೀಮಾತೆಯ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಮಾಹಿತಿ ಪತ್ರ ಲೋಕಾರ್ಪಣೆ

18/10/2022, 22:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka gmail.com

ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಸಹಿತ ಬ್ರಹ್ಮ ಕಲಶೋತ್ಸವ- 2023ರ ಮಾಹಿತಿ ಪತ್ರ ಲೋಕಾರ್ಪಣೆ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿನಯ್ ಗುರೂಜಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಧರ್ಮಕರ್ತರಾದ ಜಿ. ಭೀಮೇಶ್ವರ ಜೋಷಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಸಹಿತ ಬ್ರಹ್ಮ ಕಲಶೋತ್ಸವ- 2023ರ ಮಾಹಿತಿ ಪತ್ರ ಲೋಕಾರ್ಪಣೆ ಮಾಡಿ, ತಾರೀಕು 22-04-2023 ರಿಂದ 29-04-2023ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ನಡೆಯುವ ಬಗ್ಗೆ ಜಿ.ಭೀಮೇಶ್ವರ ಜೋಷಿ ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಯೋಜನೆಯ ಅನ್ನದಾಸೋಹ ಯೋಜನೆಯಲ್ಲಿ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಮತ್ತು ಆಯ್ದ ದೇವಸ್ಥಾನಗಳಿಗೆ ತಟ್ಟೆ ಲೋಟಗಳ ವಿವರಣೆ ಮಾಡಲಾಯಿತು. ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ ಕಳಸ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳ ವಿತರಣೆ ಮಾಡಲಾಯಿತು.

ಕಳಸ ತಾಲೂಕಿನ ಪ್ರೌಢಶಾಲೆಗಳು ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೃಷಿ ಸಮೃದ್ಧಿ ಯೋಜನೆ ಯಲ್ಲಿ ರೈತರಿಗೆ ಕಲ್ಪವೃಕ್ಷ ಸಸಿಗಳ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಅಶೋಕ್ ಹಾರ್ನಳ್ಳಿ, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರು, ರಾಜಲಕ್ಷ್ಮೀ ಬಿ. ಜೋಷಿ, ರಾಮನಾರಾಯಣ ಜೋಷಿ, ಅಖಿಲ ಭಾರತ ಬ್ರಾಹ್ಮಣ ಸಮಾಜದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ವೃಷಭರಾಜ್ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು