10:35 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇಗುಲ: ಶ್ರೀಮಾತೆಯ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಮಾಹಿತಿ ಪತ್ರ ಲೋಕಾರ್ಪಣೆ

18/10/2022, 22:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka gmail.com

ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಸಹಿತ ಬ್ರಹ್ಮ ಕಲಶೋತ್ಸವ- 2023ರ ಮಾಹಿತಿ ಪತ್ರ ಲೋಕಾರ್ಪಣೆ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿನಯ್ ಗುರೂಜಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಧರ್ಮಕರ್ತರಾದ ಜಿ. ಭೀಮೇಶ್ವರ ಜೋಷಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಸಹಿತ ಬ್ರಹ್ಮ ಕಲಶೋತ್ಸವ- 2023ರ ಮಾಹಿತಿ ಪತ್ರ ಲೋಕಾರ್ಪಣೆ ಮಾಡಿ, ತಾರೀಕು 22-04-2023 ರಿಂದ 29-04-2023ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ನಡೆಯುವ ಬಗ್ಗೆ ಜಿ.ಭೀಮೇಶ್ವರ ಜೋಷಿ ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಯೋಜನೆಯ ಅನ್ನದಾಸೋಹ ಯೋಜನೆಯಲ್ಲಿ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಮತ್ತು ಆಯ್ದ ದೇವಸ್ಥಾನಗಳಿಗೆ ತಟ್ಟೆ ಲೋಟಗಳ ವಿವರಣೆ ಮಾಡಲಾಯಿತು. ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ ಕಳಸ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳ ವಿತರಣೆ ಮಾಡಲಾಯಿತು.

ಕಳಸ ತಾಲೂಕಿನ ಪ್ರೌಢಶಾಲೆಗಳು ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೃಷಿ ಸಮೃದ್ಧಿ ಯೋಜನೆ ಯಲ್ಲಿ ರೈತರಿಗೆ ಕಲ್ಪವೃಕ್ಷ ಸಸಿಗಳ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಅಶೋಕ್ ಹಾರ್ನಳ್ಳಿ, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರು, ರಾಜಲಕ್ಷ್ಮೀ ಬಿ. ಜೋಷಿ, ರಾಮನಾರಾಯಣ ಜೋಷಿ, ಅಖಿಲ ಭಾರತ ಬ್ರಾಹ್ಮಣ ಸಮಾಜದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ವೃಷಭರಾಜ್ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು