2:41 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಮಂಡಾಡಿ ಬಿರುವೆರ್ ಫ್ರೆಂಡ್ಸ್ : ಅಶಕ್ತ ಕುಟುಂಬಗಳಿಗೆ ಧನ ಸಹಾಯ, ಮಕ್ಕಳಿಗೆ ಪುಸ್ತಕ ವಿತರಣೆ

18/10/2022, 23:06

ಬಂಟ್ವಾಳ(reporter Karnataka.com): ಬಿರುವೆರ್ ಫ್ರೆಂಡ್ಸ್ ಮಂಡಾಡಿ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ಇದರ ಸಹ ಭಾಗಿತ್ವದಲ್ಲಿ ನವರಾತ್ರಿಯ ಶಾರದಾ ಶೋಭಾಯಾತ್ರೆಗೆ ಹುಲಿವೇಷದ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಾಯಿತು.

ಬಂದ ಹಣವನ್ನು ಅಶಕ್ತ ಕುಟುಂಬಗಳಿಗೆ ಧನದ ರೂಪದಲ್ಲಿ ಮತ್ತು ಮಕ್ಕಳಿಗೆ ಪುಸ್ತಕದ ರೂಪದಲ್ಲಿ ವಿತರಿಸಲಾಯಿತು.

ಅರ್ಬಿಗುಡ್ಡೆ ನಿವಾಸಿಗಳಾದ ಲೋಕೇಶ ಮತ್ತು ಭವಾನಿ ಅವರ ಪುತ್ರ ಆಯುಷ್ ಎಂಬ ಬಾಲಕನ ವೈದ್ಯಕೀಯ ಚಿಕಿತ್ಸೆಗಾಗಿ ನೆರವನ್ನು ಸಂಸ್ಥೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಸರಕಾರಿ ಪ್ರೌಢಶಾಲೆ ಕೊಯಿಲ ಬಂಟ್ವಾಳ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆಯನ್ನು ಶ್ರೀ ದುರ್ಗಾಂಬಾ ಮಂದಿರ, ಬಿರುವೆರ್ ಫ್ರೆಂಡ್ಸ್ ಮಂಡಾಡಿ,ಮಹಮ್ಮಾಯಿ ಫ್ರೆಂಡ್ಸ್, ಸಹ ಭಾಗಿತ್ವದಲ್ಲಿ ವಿತರಿಸಲಾಯಿತು.
ಮಕ್ಕಳಿಗೆ ಸಿಹಿತಿಂಡಿ ಹಂಚಿ ಮಂದಿರದ ಅರ್ಚಕರಾದ ಪ್ರಶಾಂತ್ ಭಟ್ ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.


ಶಾಲಾ ಮುಖ್ಯೋಪಾಧ್ಯಾಯರು, ಸಹೋದ್ಯೋಗಿಗಳು, ಬಿರುವೆರ್ ಫ್ರೆಂಡ್ಸ್ ಮಂಡಾಡಿಯ ಕಾರ್ಯದರ್ಶಿ ಅನಿಲ ಪೂಜಾರಿ ಮಂಡಾಡಿ, ಮಹಾಮ್ಮಾಯಿ ಫ್ರೆಂಡ್ಸ್ ನ ಕಾರ್ಯದರ್ಶಿ ಹರೀಶ್, ಪ್ರಶಾಂತ್, ರತೀಶ್, ಕಿರಣ್ , ಸಂತೋಷ್ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು