10:15 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣೆ

19/10/2022, 10:22

ಉಡುಪಿ(reporterkarnataka.com): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು. ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ, ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ. ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.
15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು.


ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು