4:06 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣೆ

19/10/2022, 10:22

ಉಡುಪಿ(reporterkarnataka.com): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು. ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ, ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ. ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.
15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು.


ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು