5:14 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು

20/10/2022, 10:27

ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರಿ ಪ್ರದರ್ಶನ ಕಾಣುವ ಮೂಲಕ ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಯ ಪರಿಚಯ ಮಾಡಿಸುವುದು ಮಾತ್ರವಲ್ಲದೆ ಮಹತ್ವವನ್ನು ಸಾರುತ್ತಿದೆ.
ನಟ ರಿಷಬ್ ಶೆಟ್ಟಿ ಭೂತ ಕೋಲ ದೈವರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು, ಇದೀಗ ಈ ಮಾತಿಗೆ ನಟ ಚೇತನ್ ತಮ್ಮದೇ ಶೈಲಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ,ಎನ್ನುವ ನಟ ಚೇತನ್ ವಿವಾದಾತ್ಮಕ ಹೇಳಿಕೆಗೆ ಎಲ್ಲಾ ಕಡೆಯಿಂದ ಆಕ್ರೋಶಗಳು ವ್ಯಕ್ತವಾಗಿದೆ.

ಈ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಕಳ, ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೂ ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ನಟ ಚೇತನ ಕುಮಾರ್ ವಿರುದ್ದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ನಗರ ಸಂಯೋಜಕ ಸಂದೀಪ್ ಕಾರ್ಲ, ಬೋಳ ಸದಾಶಿವ ಶೆಟ್ಟಿ , ದೀಪಕ್ ಬೈಲೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು