3:57 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು

20/10/2022, 10:27

ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರಿ ಪ್ರದರ್ಶನ ಕಾಣುವ ಮೂಲಕ ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಯ ಪರಿಚಯ ಮಾಡಿಸುವುದು ಮಾತ್ರವಲ್ಲದೆ ಮಹತ್ವವನ್ನು ಸಾರುತ್ತಿದೆ.
ನಟ ರಿಷಬ್ ಶೆಟ್ಟಿ ಭೂತ ಕೋಲ ದೈವರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು, ಇದೀಗ ಈ ಮಾತಿಗೆ ನಟ ಚೇತನ್ ತಮ್ಮದೇ ಶೈಲಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ,ಎನ್ನುವ ನಟ ಚೇತನ್ ವಿವಾದಾತ್ಮಕ ಹೇಳಿಕೆಗೆ ಎಲ್ಲಾ ಕಡೆಯಿಂದ ಆಕ್ರೋಶಗಳು ವ್ಯಕ್ತವಾಗಿದೆ.

ಈ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಕಳ, ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೂ ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ನಟ ಚೇತನ ಕುಮಾರ್ ವಿರುದ್ದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ನಗರ ಸಂಯೋಜಕ ಸಂದೀಪ್ ಕಾರ್ಲ, ಬೋಳ ಸದಾಶಿವ ಶೆಟ್ಟಿ , ದೀಪಕ್ ಬೈಲೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು