5:59 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 2 ತಿಂಗಳುಗಳಿಂದ ರಕ್ಷಿಸಿಡಲಾಗಿದ್ದ 3 ಮೃತದೇಹಗಳ ಅಂತ್ಯಸಂಸ್ಕಾರ

20/10/2022, 20:36

ಉಡುಪಿ(reporterkarnataka.com): ಇಲ್ಲಿನ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶಿಥಲೀಕೃತ ಶವ ರಕ್ಷಣಾ ಘಟಕದಲ್ಲಿ ಕಳೆದ ಎರಡು ತಿಂಗಳಿಂದ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ಶವಗಳ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ, ಮಲ್ಪೆ ಪೋಲಿಸ್ ಠಾಣೆ, ನಗರ ಪೋಲಿಸ್ ಠಾಣೆಯವರು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಸಿದರು. ಮಾಧ್ಯಮ ಪ್ರಕಟಣೆ ನೀಡಿಯೂ ಮೃತರ ವಾರಸುದಾರರು ಬಾರದೆ ಇರುವುದರಿಂದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಶವಗಳನ್ನು ಗೌರಯುತವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.

ಈ ಸಂದರ್ಭ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಮಲ್ಪೆ ಪೋಲಿಸ್ ಠಾಣೆಯ ಎ.ಎಸ್.ಐ ತನಿಯ, ಹೆಡ್ ಕಾನ್ಸ್ಟೇಬಲ್ ಗಳಾದ ಶ್ರೀಧರ್, ಶಿವ ನಾಯ್ಕ್, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯ್ಕ್, ಹಾಗೂ ಜೋಸ್ ಆಲೂಕಾಶ್ ಸಿಬ್ಬಂದಿ ರಾಜೇಶ್ ಶೆಟ್ಟಿ, ಜಿತೇಶ್ ಪ್ರಶಾಂತ್, ವಿನೇಶ್, ಪ್ರದೀಪ್ ಅಜ್ಜರಕಾಡು ಭಾಗಿಯಾಗಿದ್ದರು. ಜಿಲ್ಲಾಸ್ಪತ್ರೆ, ನಗರಸಭೆ, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಯತೀಶ್, ಸಾಜೀ ಕುಮಾರ್ ಅಜ್ಜರಕಾಡು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು