12:44 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 2 ತಿಂಗಳುಗಳಿಂದ ರಕ್ಷಿಸಿಡಲಾಗಿದ್ದ 3 ಮೃತದೇಹಗಳ ಅಂತ್ಯಸಂಸ್ಕಾರ

20/10/2022, 20:36

ಉಡುಪಿ(reporterkarnataka.com): ಇಲ್ಲಿನ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶಿಥಲೀಕೃತ ಶವ ರಕ್ಷಣಾ ಘಟಕದಲ್ಲಿ ಕಳೆದ ಎರಡು ತಿಂಗಳಿಂದ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ಶವಗಳ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ, ಮಲ್ಪೆ ಪೋಲಿಸ್ ಠಾಣೆ, ನಗರ ಪೋಲಿಸ್ ಠಾಣೆಯವರು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಸಿದರು. ಮಾಧ್ಯಮ ಪ್ರಕಟಣೆ ನೀಡಿಯೂ ಮೃತರ ವಾರಸುದಾರರು ಬಾರದೆ ಇರುವುದರಿಂದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಶವಗಳನ್ನು ಗೌರಯುತವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.

ಈ ಸಂದರ್ಭ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಮಲ್ಪೆ ಪೋಲಿಸ್ ಠಾಣೆಯ ಎ.ಎಸ್.ಐ ತನಿಯ, ಹೆಡ್ ಕಾನ್ಸ್ಟೇಬಲ್ ಗಳಾದ ಶ್ರೀಧರ್, ಶಿವ ನಾಯ್ಕ್, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯ್ಕ್, ಹಾಗೂ ಜೋಸ್ ಆಲೂಕಾಶ್ ಸಿಬ್ಬಂದಿ ರಾಜೇಶ್ ಶೆಟ್ಟಿ, ಜಿತೇಶ್ ಪ್ರಶಾಂತ್, ವಿನೇಶ್, ಪ್ರದೀಪ್ ಅಜ್ಜರಕಾಡು ಭಾಗಿಯಾಗಿದ್ದರು. ಜಿಲ್ಲಾಸ್ಪತ್ರೆ, ನಗರಸಭೆ, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಯತೀಶ್, ಸಾಜೀ ಕುಮಾರ್ ಅಜ್ಜರಕಾಡು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು