6:28 AM Wednesday12 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್

21/10/2022, 22:09

ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ.

ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದು ದಿಲೀಪ್, ವಿವೇಕಾನಂದ ಶೆಣೈ ಎಂಬುವವರೊಂದಿಗೆ ಗೇರು ಬೀಜ ಕಾರ್ಖಾನೆಯ ಪಾಲುದಾರನಾಗಿ ಕೆಲಸ ಮಾಡಿಕೊಂಡಿದ್ದರು.

ಪ್ಲಾಂಟೇಷನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಿಲೀಪ್ ಅವರಿಗೆ ಗ್ರಾಸ್ ಕಟ್ಟಿಂಗ್ ಮಾಡಲು ಬಂದ ವಸಂತ ಎಂಬಾತ ಕರೆ ಮಾಡಿ ಗೇಟಿನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಮೃತದೇಹದಂತೆ ಪತ್ತೆಯಾದುದರ ಕುರಿತು ತಿಳಿಸಿದ್ದು ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹ ಪತ್ತೆಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಗೋಪಿ ಎಂಬಾತನ ಮೃತದೇಹ ಇದಾಗಿದ್ದು ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿದೆ. ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಎಂಬಾತನಿಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ಆಫ್ ಆಗಿದೆ.
ಎರಡು ದಿನಗಳ ಹಿಂದೆ ದಿಲೀಪ್ ರವರೊಂದಿಗೆ ಗೋಪಿ ಮಾತನಾಡಿದ್ದು ಬಳಿಕ ಈ ಕೊಲೆ ನಡೆದಿದೆ .ಜೊತೆಯಲ್ಲಿದ್ದ ಕೆಲಸಗಾರ ಬಾಹುಲೇಯನ್ ಕಾಣೆಯಾಗಿರುವುದರಿಂದ ಗೋಪಿಯನ್ನು ಆತನೇ ಕೊಲೆಗೈದು ಸುಟ್ಟಿದ್ದಾನೆ ಎಂದು ಸಂಶಯಿಸಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು