10:03 AM Monday21 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್

21/10/2022, 22:09

ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ.

ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದು ದಿಲೀಪ್, ವಿವೇಕಾನಂದ ಶೆಣೈ ಎಂಬುವವರೊಂದಿಗೆ ಗೇರು ಬೀಜ ಕಾರ್ಖಾನೆಯ ಪಾಲುದಾರನಾಗಿ ಕೆಲಸ ಮಾಡಿಕೊಂಡಿದ್ದರು.

ಪ್ಲಾಂಟೇಷನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಿಲೀಪ್ ಅವರಿಗೆ ಗ್ರಾಸ್ ಕಟ್ಟಿಂಗ್ ಮಾಡಲು ಬಂದ ವಸಂತ ಎಂಬಾತ ಕರೆ ಮಾಡಿ ಗೇಟಿನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಮೃತದೇಹದಂತೆ ಪತ್ತೆಯಾದುದರ ಕುರಿತು ತಿಳಿಸಿದ್ದು ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹ ಪತ್ತೆಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಗೋಪಿ ಎಂಬಾತನ ಮೃತದೇಹ ಇದಾಗಿದ್ದು ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿದೆ. ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಎಂಬಾತನಿಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ಆಫ್ ಆಗಿದೆ.
ಎರಡು ದಿನಗಳ ಹಿಂದೆ ದಿಲೀಪ್ ರವರೊಂದಿಗೆ ಗೋಪಿ ಮಾತನಾಡಿದ್ದು ಬಳಿಕ ಈ ಕೊಲೆ ನಡೆದಿದೆ .ಜೊತೆಯಲ್ಲಿದ್ದ ಕೆಲಸಗಾರ ಬಾಹುಲೇಯನ್ ಕಾಣೆಯಾಗಿರುವುದರಿಂದ ಗೋಪಿಯನ್ನು ಆತನೇ ಕೊಲೆಗೈದು ಸುಟ್ಟಿದ್ದಾನೆ ಎಂದು ಸಂಶಯಿಸಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು